ಕುಮಟಾ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಸಮುದ್ರ ಪಾಲು

ಕುಮಟಾ: ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಗಳು ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡ ಬೀಚಿನಲ್ಲಿ ನಡೆದಿದೆ.
ನೀರು ಪಾಲಾದ ವಿದ್ಯಾರ್ಥಿಗಳನ್ನು ಮೇಘಾ ಹಾಗೂ ರೇಣುಕಾ ಪ್ರಸಾದ್ ಎಂದು ಗುರುತಿಸಲಾಗಿದೆ.
ದಾವಣಗೆರೆ ಮೂಲದ ಮೇಘಾ ಮತ್ತು ರೇಣುಕಾ ಪ್ರಸಾದ್ ಪ್ರವಾಸಕ್ಕೆ ಬಾಡದ ಹುಬ್ಬಣಗೇರಿ ಕಡಲತೀರಕ್ಕೆ ಬಂದಿದ್ದರು. ಈ ವೇಳೆ ಈಜಲು ತೆರಳಿದ್ದಾರೆ. ಸಮುದ್ರದ ರಭಸಕ್ಕೆ ಸಿಲುಕಿದ್ದು, ನಾಪತ್ತೆಯಾಗಿದ್ದಾರೆ.
ಈ ದುರ್ಘಟನೆಯಲ್ಲಿ  ಇಂಜಿನಿಯರಿಂಗ್‌ ವಿದ್ಯಾರ್ಥಿ ಮೇಘಾಳ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರ ಸುಳಿವು ಇನ್ನೂ ಸಿಕ್ಕಿಲ್ಲ. ಹುಡುಕಾಟ ಮುಂದುವರಿದಿದೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿದ್ದು,   ಪೊಲೀಸರು. ಮೀನುಗಾರರು ಹುಡುಕುತ್ತಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement