ಮತ್ತೊಂದು ಅಮಾನವೀಯ ಘಟನೆ: ಅಕ್ರಮವಾಗಿ 100 ಆಕಳು ಕರುಗಳ ಸಾಗಿಸುತ್ತಿದ್ದ ವಾಹನ ಪಲ್ಟಿ, 50 ಕರುಗಳು ಸಾವು..!

ಹಾಸನ: ಬಾಯಿ, ಕಾಲಿಗೆ ಹಗ್ಗ ಕಟ್ಟಿ ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತವಾಗಿ 50 ಮೂಕ ಪ್ರಾಣಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ, ದ್ಯಾವಪ್ಪನಹಳ್ಳಿ ಗ್ರಾಮದ ಬಳಿ ರಾತ್ರಿ ನಡೆದಿದೆ.
38 ಮಂಗಗಳ ಮಾರಣಹೋಮ‌ ಮಾಸುವ ಮುನ್ನವೇ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಅ
ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್‌ ವಾಹನದಲ್ಲಿ 50ಕ್ಕೂ ಹೆಚ್ಚು ಕರುಗಳನ್ನ ಸಾಗಿಸುತ್ತಿದ್ದರು. ಗೋಹತ್ಯೆ ನಿಷೇಧ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗಾಟ ಮಾಡಲಾಗುತ್ತಿತ್ತು.
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ವಾಹನದಲ್ಲಿದ್ದ 50ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಈ ಪೈಕಿ ಕೆಲವು ಕರುಗಳು ವಾಹನದಲ್ಲಿಯೇ ಉಸಿರುಗಟ್ಟಿ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು ಇನ್ನೂ ಕೆಲವು ಕರುಗಳು ಅಪಘಾತದ ವೇಳೆ ಮೃತಪಟ್ಟಿವೆ ಎನ್ನಲಾಗಿದೆ.
ಮಾಹಿತಿ ತಿಳಿದ ತಕ್ಷಣ ಅಪಘಾತ ಸ್ಥಳಕ್ಕೆ ತೆರಳಿ 30 ಕರುಗಳನ್ನು ಬೇಲೂರು ಶಾಸಕ ಲಿಂಗೇಶ್ ರಕ್ಷಿಸಿದ್ದಾರೆ. ಘಟನೆ ಬಗ್ಗೆ ಲಿಂಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಆಹಾರವಿಲ್ಲದೆ 20ಕ್ಕೂ ಹೆಚ್ಚು ಕರುಗಳು ತೊಂದರೆ ಅನುಭವಿಸುತ್ತಿವೆ.
ಜುಲೈ 28 ರಂದು 38 ಮಂಗಗಳ ಮಾರಣಹೋಮ ನಡೆದಿತ್ತು. ಘಟನೆ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿ, ಹೈಕೋರ್ಟ್ ತನಿಖೆ ನಡೆಸುತ್ತಿದೆ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ತಾಲೂಕು ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಸ್ವತಃ ವಿಡಿಯೋ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಬೇಲೂರು ಶಾಸಕ ಲಿಂಗೇಶ್ ಸಹ ಆಗ್ರಹಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement