ಕಾರು-ಬೈಕ್‌ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

ಗೋಕಾಕ :ಗೋಕಾಕ ಸಮೀಪದ ಲೋಳಸೂರ ಬ್ಯಾಳಿ ಬಸವನ ದೇವಸ್ಥಾನದ ಬಳಿ ಸ್ವಿಫ್ಟ್ ಕಾರು 2 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಮೃತರನ್ನು ಗೋಪಾಲ ಮುತ್ನಾಳ(36), ರಾಮಣ್ಣ ಮಗ್ಗೆಪ್ಪಗೋಳ(40), ನೀಲವ್ವ ತಳವಾರ(44) ಎಂದು ಗುರುತಿಸಲಾಗಿದೆ. ಇವರು ಹುಣಶ್ಯಾಳ ಗ್ರಾಮದವರು.ಮೃತ ಗೋಪಾಲ, ರಾಮಣ್ಣ ಇಬ್ಬರೂ ಪಿ.ಜಿ ಹುಣಶ್ಯಾಳ ಗ್ರಾಮದ ನಿವಾಸಿಗಳು. ಮೃತ ಮಹಿಳೆ ನೀಲವ್ವ ತಳವಾರ ಮೂಡಲಗಿ ತಾಲೂಕಿನ ನಾಗನೂರು ನಿವಾಸಿ ಎಂದು ಹೇಳಲಾಗಿದೆ.
ಗೋಕಾಕ ನಿಂದ ಹುಣಶ್ಯಾಳ ಕಡೆ ಹೊರಟಿದ್ದ ಬೈಕ್ ಗಳಿಗೆ ಮೂಡಲಗಿಯಿಂದ ಗೋಕಾಕ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ.ಇವರು ಗೋಕಾಕ ತಾಲೂಕಿನ ಮಕ್ಕಳಗೇರಿ ಗ್ರಾಮಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.ಬೈಕ್‍ಗೆ ಡಿಕ್ಕಿಯಾಗಿ ಕಾರು ಸಹ ಪಲ್ಟಿಯಾಗಿದ್ದು, ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement