ಹಂಪಿ ಪ್ರವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ

ಹುಬ್ಬಳ್ಳಿ:ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಎಂ.ಉಷಾ ಅ ಇಂದು ಸಂಜೆ (ಶುಕ್ರವಾರ) ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ,ಶಾಸಕ ಜಗದೀಶ್ ಶೆಟ್ಟರ್ ಶಾಲು ಹಾಕಿ ಸ್ವಾಗತಿಸಿದರು. ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಪುಸ್ತಕಗಳನ್ನು ನೀಡಿ ಬರಮಾಡಿಕೊಂಡರು..
ಭಾರತೀಯ ವಾಯುಸೇನೆಯ ವಿಶೇಷ ಹೆಲಿಕಾಪಟ್ಟರ್ ಮೂಲಕ ಉಪರಾಷ್ಟ್ರಪತಿಗಳು ಹೊಸಪೇಟೆಗೆ ತೆರಳಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ನಿಮ್ಮ ಕಾಮೆಂಟ್ ಬರೆಯಿರಿ

advertisement