ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಹೀಗಾಗಿ ಬಳಿಕ 9 ತಿಂಗಳ ಬಳಿಕ ವಿನಯ್ ಕುಲಕರ್ಣಿ ಇಂದು (ಶನಿವಾರ) ಬಿಡುಗಡೆಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಅವರನ್ನು ಹಿಂಡಲಗಾ ಜೈಲಧಿಕಾರಿಗಳು ಪ್ರಕ್ರಿಯೆ ಮುಗಿಸಿ ಬಿಡುಗಡೆಗೊಳಿಸಿದ್ದಾರೆ.ಸುಪ್ರೀಂಕೋರ್ಟ್ನ ಷರತ್ತಿನ ಅನ್ವಯ ವಿನಯ್ ಕುಲಕರ್ಣಿ ಅವರು ಧಾರವಾಡಕ್ಕೆ ಹೋಗುವಂತಿಲ್ಲ.
ಜೈಲಿನ ಹೊರಗೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು, ಕುಟುಂಬಸ್ಥರು ಅವರನ್ನು ಸ್ವಾಗತಿಸಿದರು. ಈ ವೇಳೆ ನೂಕುನುಗ್ಗಲು ಉಂಟಾಯಿತು ಪೊಲೀಸರು ಗುಂಪನ್ನು ಚದುರಿಸಲು ಹರಸಾಹಸಪಟ್ಟರು.
ಆದರೆ, ಈ ವೇಳೆ ಕೊರೊನಾ ನಿಯಮಾವಳಿಗಳನ್ನು ಸಂಪೂರ್ಣ ಉಲ್ಲಂಘಿಸಿದ ಕಾರಣಕ್ಕಾಗಿ ವಿನಯ್ ಕುಲಕರ್ಣಿ ಹಾಗೂ ಅವರ 3 ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಜೈಲಿನಿಂದ ಬಿಡುಗಡೆ ನಂತರ ಮಾತನಾಡಿ ಅವರು, ಮುಂಬರುವ ದಿನಗಳಲ್ಲಿ ನಾನು ಹೇಗಿರಬೇಕೆಂದು ಎಂದು ಪಾಠ ಕಲಿತಿದ್ದೇನೆ, ಇಂದು ಜಾಮೀನು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ನಿರಪರಾಧಿಯಾಗಿ ಹೊರಬರುತ್ತೇನೆ ಎಂದು ಹೇಳಿದರು.
ಜೈಲಿನಲ್ಲಿದ್ದಾಗ ಸಾಕಷ್ಟು ವಿಚಾರಗಳನ್ನು ಕಲಿತಿದ್ದೇನೆ. ನನಗೆ ಪುಸ್ತಕ ಓದುವ ಅಭ್ಯಾಸವೇ ಇರಲಿಲ್ಲ. ಜೈಲಿನಲ್ಲಿ ಪುಸ್ತಕ ಓದುವುದನ್ನು ಕಲಿತೆ. ಮುಂದಿನ ಜೀವನದಲ್ಲಿ ಹೇಗಿರಬೇಕು ಎಂಬ ಪಾಠ ಕಲಿತಿದ್ದೇನೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ