ವಿಶ್ವಪ್ರಸಿದ್ಧ ಹಂಪಿ ದೇವಸ್ಥಾನಕ್ಕೆ ಉಪರಾಷ್ಟ್ರಪತಿ ಭೇಟಿ

ಹೊಸಪೇಟೆ: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಶನಿವಾರ ವಿಶ್ವಪ್ರಸಿದ್ಧ ಹಂಪಿ ದೇವಸ್ಥಾನಕ್ಕೆ ಭೇಟಿ ನೀಡುವರು. ಅವರ ಭೇಟಿ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇವಸ್ಥಾನದಲ್ಲಿ ಕೆಂಪು ನೆಲಹಾಸು ಹಾಕಲಾಗಿದೆ.
ವಿರೂಪಾಕ್ಷೇಶ್ವರ ದೇಗುಲದಲ್ಲಿ ಪೂಜೆ ನೆರವೇರಿಸುವ ಅವರು, ಕೃಷ್ಣ ದೇವಸ್ಥಾನ, ಕಡಲೆಕಾಳು, ಸಾಸಿವೆಕಾಳು, ಕಮಲ ಮಹಲ್, ಮಹಾನವಮಿ ದಿಬ್ಬ, ವಿಜಯ ವಿಠಲ ದೇವಸ್ಥಾನಕ್ಕೆ ತೆರಳಿ ಕಲ್ಲಿನ ರಥ, ಸಪ್ತಸ್ವರ ಮಂಟಪ ವೀಕ್ಷಿಸಲಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ಪ್ರಯುಕ್ತ ಹಂಪಿಯಲ್ಲಿ ಇನ್ನಷ್ಟು ಭದ್ರತೆ ಹೆಚ್ಚಿಸಲಾಗಿದೆ. ಕುಟುಂಬ ಸಮೇತರಾಗಿ ಆಗಮಿಸಿರುವ ಅವರು, ನಿನ್ನೆ (ಶುಕ್ರವಾರ) ಅವರು ತುಂಗಭದ್ರಾ ಡ್ಯಾಂ ವೀಕ್ಷಣೆ ಮಾಡಿದ್ದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement