ಬೆಂಗಳೂರು: ನಗರದ ಆಹಾರ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎಂಎಂ ಫುಡ್ ಕಾರ್ಖಾನೆಯಲ್ಲಿ ಸೋಮವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಇಂದು (ಮಂಗಳವಾರ) ಮುಂಜಾನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಎಂಎಂ ಫುಡ್ ಕಾರ್ಖಾನೆಯ ಬಾಯ್ಲರ್ನಲ್ಲಿ ಹೆಚ್ಚಿನ ಉಷ್ಣಾಂಶ ಉಂಟಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸ್ಫೋಟದ ದುರ್ಘಟನೆ ಸೌರವ್ಕುಮಾರ್ ಮತ್ತು ಮನೀಶ್ ಮೃತಪಟ್ಟಿದ್ದರು. ಇಂದು ಮುಂಜಾನೆ ಪಾಲುದಾರ ಸಚಿನ್ ಮತ್ತು ಕಾರ್ಮಿಕರಾದ ಧನಲಕ್ಷ್ಮಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.
ಗಾಯಗೊಂಡಿರುವ ಶಾಂತಿ ಎಂಬುವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಖಾನೆಯಲ್ಲಿ ಎಂದಿನಂತೆ ಸ್ಯ್ಯಾಕ್ಸ್ ತಯಾರಿಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಬಾಯ್ಲರ್ ಸ್ಫೋಟಗೊಂಡಿತ್ತು. ಇ
ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಕಾರ್ಖಾನೆಯನ್ನು ಸಚಿನ್ ಮತ್ತು ವಿಜಯ್ಮೆಹ್ತಾ ಪಾಲುದಾರರಾಗಿ ನಡೆಸುತ್ತಿದ್ದರು. ಕಾರ್ಖಾನೆ ನಡೆಸುತ್ತಿದ್ದ ಪಾಲುದಾರ ಹಾಗೂ ಕಟ್ಟಡದ ಮಾಲೀಕನ ವಿರುದ್ಧ ಮಾಗಡಿ ರಸ್ತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಖಾನೆಯ ಪಾಲುದಾರ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ