ಏಪ್ರಿಲ್-ಜೂನ್ ತ್ರೈಮಾಸಿಕ: ಭಾರತದ ಜಿಡಿಪಿ ಶೇ.18.5ರಷ್ಟು ಬೆಳವಣಿಗೆ

ನವದೆಹಲಿ: ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ದೇಶದ ಒಟ್ಟು ಜಿಡಿಪಿ ಶೇ.18.5ರಷ್ಟು ಬೆಳವಣಿಗೆ ಕಾಣುವ ನಿರೀಕ್ಷೆ ಇದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಹೇಳಿದೆ.
ಕೈಗಾರಿಕಾ ಚಟುವಟಿಕೆ, ಸೇವಾ ವಲಯ ಮತ್ತು ಜಾಗತಿಕ ಅರ್ಥ ವ್ಯವಸ್ಥೆಯ ಜತೆ ಬೆಸೆದುಕೊಂಡಿರುವ 41 ಸೂಚ್ಯಂಕಗಳನ್ನು ಆಧರಿಸಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯನ್ನು ಅಂದಾಜಿಸುವ ನೌಕಾಸ್ಟಿಂಗ್ ಮಾದರಿಯನ್ನು ಎಸ್‌ಬಿಐ ಅಳವಡಿಸಿದೆ.
ಆರ್‌ಬಿಐ ಅಂದಾಜಿನ ಪ್ರಕಾರ ದೇಶದ ಅರ್ಥ ವ್ಯವಸ್ಥೆಯ ಬೆಳವಣಿಗೆ ದರವು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇ.21.4ರಷ್ಟು ಇರಲಿದೆ. ನೌಕಾಸ್ಟಿಂಗ್ ಮಾದರಿ ಆಧರಿಸಿ, ಕ್ವಾರ್ಟರ್ 1 ಆರ್ಥಿಕ ವರ್ಷ 22ರ ಮುನ್ಸೂಚನೆ ಜಿಡಿಪಿ ಬೆಳವಣಿಗೆ ಸುಮಾರು ಶೇ.18.5ರಷ್ಟು ಇರಲಿದೆ. ಇಲ್ಲಿಯವರೆಗೆ ಪ್ರಕಟಿಸಲಾದ ಕಾರ್ಪೊರೇಟ್ ಫಲಿತಾಂಶದ ಪ್ರಕಾರ ಈ ಹಣಕಾಸು ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ಬಡ್ಡಿ, ತೆರಿಗೆಗಳು, ಸವಕಳಿ ಮತ್ತು ಭೋಗ್ಯಕ್ಕಿಂತ ಉದ್ಯೋಗಿ ವೆಚ್ಚದಲ್ಲಿ ಗಣನೀಯ ಚೇತರಿಕೆ ಇದೆ ಎಂದು ಸೂಚಿಸುತ್ತಿದೆ.
ಒಟ್ಟು 4069 ಕಂಪನಿಗಳು ಕಾರ್ಪೊರೇಟ್ GVA ಈ ಹಣಕಾಸು ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ಶೇ.28.4ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಆದಾಗ್ಯೂ ಇದು ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕದ ಬೆಳವಣಿಗೆಗಿಂತ ಕಡಿಮೆಯಾಗಿದೆ.
ಜಾಗತಿಕ ಮಟ್ಟದಲ್ಲಿ ಕಡಿಮೆ ಚಲನಶೀಲತೆಯು ಕಡಿಮೆ ಜಿಡಿಪಿಗೆ ಹಾಗೂ ಹೆಚ್ಚಿನ ಚಲನಶೀಲತೆಯು ಹೆಚ್ಚಿನ ಜಿಡಿಪಿಗೆ ಕಾರಣವಾಗುತ್ತದೆ.
ಈವರೆಗೆ ಭಾರತವನ್ನು ವಿಶ್ವದ 5 ಪ್ರಬಲ ಆರ್ಥಿಕತೆ ಹೊಂದಿರುವ ರಾಷ್ಟ್ರ, ಅಭಿವೃದ್ಧಿ ಶೀಲ ರಾಷ್ಟ್ರ ಎಂದೇ ಪರಿಗಣಿಸಲಾಗಿತ್ತು. ಆದರೆ, ವಿಶ್ವಬ್ಯಾಂಕ್ ಇದೀಗ ಭಾರತವನ್ನು ಅಭಿವೃದ್ಧಿಶೀಲ ರಾಷ್ಷ್ರಗಳ ಪಟ್ಟಿಯಿಂದಲೇ ಹೊರಗಿಟ್ಟಿದೆ. ಇದಕ್ಕೆ ಕಾರಣ ಭಾರತದ ಆರ್ಥಿಕತೆಯಲ್ಲಿನ ಭಾರೀ ಕುಸಿತ.
ಕಳೆದ ಒಂದು ದಶಕದಿಂದ ಭಾರತ ಒಟ್ಟಾರೆ ಆರ್ಥಿಕತೆಯನ್ನು 3 ಟ್ರಿಲಿಯನ್ ಅಮೆರಿಕನ್ ಡಾಲರ್ ಎಂದು ಅಂದಾಜಿಸಲಾಗಿತ್ತು. ಜಿಡಿಪಿ ದರ 9 ರ ಆಸುಪಾಸಿನಲ್ಲಿತ್ತು. ಅಲ್ಲದೆ, 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕಡೆಗೆ ಹೆಜ್ಜೆ ಇಡುವುದು ನಮ್ಮ ಧ್ಯೇಯ ಎಂದು ಕಳೆದ ವರ್ಷ ಸ್ವತಃ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.
ಭಾರತದ ಆರ್ಥಿಕತೆ ಇದೀಗ 3 ಟ್ರಿಲಿಯನ್​ನಿಂದ 2 ಟ್ರಿಲಿಯನ್ ಡಾಲರ್ ಕಡೆಗೆ ಹಿಮ್ಮುಖವಾಗಿ ಚಲಿಸುತ್ತಿದೆ. ದೇಶದ ಜಿಡಿಪಿ ದರ 9 ರಿಂದ 5ಕ್ಕೆ ಕುಸಿದಿದೆ. ಅಸಲಿಗೆ ಒಂದು ದೇಶದ ಜನ ಎಷ್ಟರ ಮಟ್ಟಿಗೆ ಹಣವನ್ನು ಖರ್ಚು ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂಬುದರ ಆಧಾರದ ಮೇಲೆಯೇ ಆ ದೇಶದ ಆರ್ಥಿಕತೆಯನ್ನು ನಿರ್ಧರಿಸಲಾಗುತ್ತದೆ. ಯಾವ ದೇಶದಲ್ಲಿ ಆಂತರಿಕವಾಗಿ ಅಧಿಕ ಪ್ರಮಾಣದ ದ್ರವರೂಪಿ ಹಣ ವಹಿವಾಟು ನಡೆಯುತ್ತದೆಯೋ ಅದರ ಆಧಾರದಲ್ಲಿಯೇ ಆ ದೇಶದ ಜಿಡಿಪಿ ದರವನ್ನು ಅಳೆಯಲಾಗುತ್ತದೆ ಮತ್ತು ಅದನ್ನು ಉತ್ತಮ ಅಥವಾ ಅಭಿವೃದ್ಧಿಯ ಆರ್ಥಿಕತೆ ಎಂದು ಕರೆಯಲಾಗುತ್ತದೆ.
ಕೋವಿಡ್-19 ಸಾಂಕ್ರಾಮಿಕದಿಂದ ಲಾಕ್‌ಡೌನ್‌ಗಳು ಮತ್ತು ಸಾಮಾಜಿಕ ಅಂತರದ ಮಾನದಂಡಗಳು ಆಗಲೇ ನಿಧಾನಗತಿಯಲ್ಲಿದ್ದ ಜಾಗತಿಕ ಆರ್ಥಿಕತೆಯನ್ನು ಸ್ಥಗಿತಗೊಳಿಸಿದವು. ಬಡ್ಡಿ ದರಗಳನ್ನು ಕಡಿಮೆ ಮಾಡುವುದು ಹಾಗೂ ಪರಿಮಾಣಾತ್ಮಕ ಕ್ರಮಗಳು ಮೂಲಕ ಆರ್ಥಿಕತೆಗಳನ್ನು ಬೆಂಬಲಿಸಲು ಜಗತ್ತಿನಾದ್ಯಂತದ ಸರ್ಕಾರಗಳು ಮತ್ತು ಕೇಂದ್ರೀಯ ಬ್ಯಾಂಕುಗಳು ವಿವಿಧ ನೀತಿಗಳನ್ನು ರೂಪಿಸಿವೆ. ಭಾರತವು ನಿಯಂತ್ರಣ, ವಿತ್ತೀಯ, ಹಣಕಾಸು ಮತ್ತು ದೀರ್ಘಕಾಲೀನ ರಚನಾತ್ಮಕ ಸುಧಾರಣೆಗಳು ಎಂಬ ನಾಲ್ಕು ಸ್ತಂಭಗಳ ತಂತ್ರವನ್ನು ಅಳವಡಿಸಿಕೊಂಡಿದೆ.

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement