ಮೈಸೂರು: ಬಹುದಿನಗಳಿಂದ ಜೆಡಿಎಸ್ನಿಂದ ಮಾನಸಿಕವಾಗಿ ದೂರವಾಗಿದ್ದ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ಗೆ ಗುಡ್ ಬೈ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತಾಡಿದ ಜಿ.ಟಿ ದೇವೇಗೌಡ, ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ನನ್ನನ್ನ ಕ್ಷಮಿಸಿ ಅಪ್ಪಾಜಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರಿಗೆ ಹೇಳಿದ್ದಾರೆ.
ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಸೇರುವ ಬಗ್ಗೆ ಮಾತಾಡಿದ್ದೇನೆ. ಎಂದು ಹೇಳಿರುವ ಅವರು ನಿಮ್ಮ ಆಶೀರ್ವಾದ ಹೀಗೆ ಇರಲಿ ಎಂದು ದೇವೇಗೌಡರಿಗೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ಸಿನಲ್ಲಿ ನನಗೆ, ನನ್ನ ಮಗ ಇಬ್ಬರಿಗೂ ಟಿಕೆಟೆ ಕೇಳಿದ್ದು, ಸಿಗುವ ವಿಶ್ವಾಸ ಇದೆ. ನೀನು ನಮ್ಮ ಪಕ್ಷಕ್ಕೆ ಸೇರ್ಪಡೆಯಾದರೆ, ನಾನು ಚಾಮುಂಡೇಶ್ವರಿಯಲ್ಲಿ ನಿಲ್ಲುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಯಾವತ್ತೂ ಇಬ್ಭಾಗ ಆಗಿಲ್ಲ ಎಂದು ತಿಳಿಸಿದರು.
ನಾನು ಇಬ್ಬರೂ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಈ ಅವಧಿಯವರೆಗೂ ನಾನು ಜೆಡಿಎಸ್ನಲ್ಲಿ ಇರುತ್ತೇನೆ. ನಾಳೆ ನಡೆಯುವ ಮೈಸೂರು ಮೇಯರ್ ಚುನಾವಣೆಗೆ ಹೋಗಬೇಕೋ ಬೇಡವೋ ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ