ಜಿಂಕೆ ಬೇಟೆಯಾಡಿ ಹೆಗಲ ಮೇಲೆ ಹೊತ್ತು ಬರುತ್ತಿದ್ದವರಿಗೆ ಅರಣ್ಯಾಧಿಕಾರಿಗಳಿಂದ ಗುಂಡೇಟು; ಒಬ್ಬ ಸೆರೆ, ಮೂವರು ಪರಾರಿ

ಮಂಡ್ಯ: ವನ್ಯಪ್ರಾಣಿಗಳ ಬೇಟೆಯಲ್ಲಿ ನಿರತರಾಗಿದ್ದ ನಾಲ್ಕು ಮಂದಿ ಕಳ್ಳರ ತಂಡವೊಂಕ್ಕೆಅರಣ್ಯಾಧಿಕಾರಿಗಳಿಂದ ಗುಂಡೇಟು ತಿಂದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬಸವನಬೆಟ್ಟದ ಬಳಿ ನಡೆದ ಬಗ್ಗೆ ವರದಿಯಾಗಿದೆ.
ನಾಲ್ವರು ಕಳ್ಳರು ಜಿಂಕೆಯೊಂದನ್ನು ಕೊಂದು ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಗಸ್ತಿನಲ್ಲಿದ್ದ ವನಪಾಲಕರಿಗೆ ಅಚಾನಕ್​ ಆಗಿ ಎದುರಾಗಿದ್ದಾರೆ. ತಕ್ಷಣವೇ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು. ಆದರೆ ಅರಣಯ ಸಿಬ್ಬಂದಿ ಶೂಟೌಟ್​ ಮಾಡಿದ ಪರಿಣಾಮ ವೆಂಕಟೇಶ್ ಎಂಬಾತ ಗುಂಡೇಟು ತಿಂದು ಸಿಕ್ಕಿಹಾಕಿಕೊಂಡಿದ್ದಾನೆ. ಇನ್ನುಳಿದ ಮೂವರು ಪರಾರಿಯಾಗಿದ್ದಾರೆ.
ಬೇಟೆಗೆಂದು ಅರಣ್ಯಕ್ಕೆ ತೆರಳಿದ್ದ ಈ ತಂಡದವರು ಬಂದೂಕು ಉಪಯೋಗಿಸಿ ಜಿಂಕೆಯೊಂದನ್ನು ಕೊಂದಿದ್ದಾರೆ ಎಂದು ತಿಳಿದುಬಂದಿದೆ. ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿ ಶಿಕಾರಿಗೆಂದು ಇವರು ತೆರಳಿದ್ದು, ಅದೇ ಸಂದರ್ಭದಲ್ಲಿ ವನಪಾಲಕರು ಗಸ್ತಿಗೆ ತೆರಳಿದ ಪರಿಣಾಮ ವಿಷಯ ಬೆಳಕಿಗೆ ಬಂದಿದೆ. ಹಲಗೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಗುಂಡೇಟು ತಿಂದ ವೆಂಕಟೇಶ್ ಎಂಬಾತನಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಪ್ಪಿಸಿಕೊಂಡ ಮೂವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement