ತಿರುವನಂತಪುರಂ: ಪ್ರಸಿದ್ಧ ಶಬರಿ ಮಲೆ ಅಯ್ಯಪ್ಪ ದೇಗುಲ ಸೆಪ್ಟೆಂಬರ್ 17ರಿಂದ ಐದು ದಿನಗಳ ಕಾಲ ತೆರೆಯಲಿದೆ.
ಮೊದಲೇ ಬುಕ್ಕಿಂಗ್ ಮಾಡಿಕೊಂಡ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಸೆಪ್ಟೆಂಬರ್ 17ರಿಂದ ಆರಂಭವಾಗಲಿರುವ ಐದು ದಿನಗಳ ಪೂಜಾ ಕಾರ್ಯಗಳಿಗೆ ಭೇಟಿ ನೀಡ ಬಯಸುವ ಭಕ್ತರು ಇಂದಿನಿಂದ ಆನ್ಲೈನ್ ಬುಕ್ಕಿಂಗ್ ಮಾಡಬಹುದಾಗಿದೆ.ಟಿಡಿಬಿ ಅಧಿಕೃತ ವೆಬ್ಸೈಟ್ ಮೂಲಕ ಭಕ್ತಾದಿಗಳು ದೇವರ ದರ್ಶನಕ್ಕೆ ಬುಕ್ಕಿಂಗ್ ಮಾಡಿಕೊಳ್ಳಬಹುದು. https://www.onlinetdb.com/tdbweb/dist/login ಗೆ ಲಾಗಿನ್ ಮಾಡಬಹುದಾಗಿದೆ. ಪ್ರತಿದಿನ 15 ಸಾವಿರ ಭಕ್ತಾದಿಗಳಿಗೆ ಮಾತ್ರ ಅವಕಾಶ ಇರಲಿದೆ.ಎರಡು ಡೋಸ್ ಲಸಿಕೆ ಪಡೆದವರು ಅಥವಾ ದೇವಸ್ಥಾನಕ್ಕೆ ಭೇಟಿ ಸಮಯದಲ್ಲಿ ಮಾಡಿಸಿಕೊಂಡಿರುವ ಆರ್ಟಿಪಿಸಿಆರ್ ಪರೀಕ್ಷೆಯ ವರದಿ ಇರುವವರಿಗೆ ಮಾತ್ರವೇ ದೇವರ ದರ್ಶನಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ