ಪಶ್ಚಿಮ ಬಂಗಾಳ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಮನೆ ಗೇಟಿಗೆ ಕಚ್ಚಾ ಬಾಂಬ್‌ ಎಸೆತ

ಕೋಲ್ಕತ್ತಾ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಅವರ ಮನೆಯ ಸಮೀಪದಲ್ಲಿ ಇಂದು (ಬುಧವಾರ) ಬೆಳಗ್ಗೆ ಮೂರು ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದೆ.
ಕೋಲ್ಕತ್ತಾದಿಂದ ಸುಮಾರು 100 ಕಿ.ಮೀ. ದೂರದ ಜಗತ್‌ದಲ್‌ನಲ್ಲಿರುವ ಅರ್ಜುನ್‌ ಸಿಂಗ್‌ ಅವರ ಮನೆಯ ಗೇಟಿಗೆ ಬಾಂಬ್‌ಗನನು ಎಸೆಯಲಾಗಿದ್ದು. ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗ್ಗೆ 6:30ರ ಸುಮಾರಿಗೆ ಈ ಕಚ್ಚಾ ಬಾಂಬ್‌ಗಳು ಸ್ಫೋಟಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
ಸಂಸದ ಅರ್ಜುನ್‌ ಸಿಂಗ್‌ ಪ್ರಸ್ತುತ ದೆಹಲಿಯಲ್ಲಿದ್ದು, ಘಟನೆಯ ಕುರಿತು ಪ್ರತಿಕ್ರಿಯೆ ನೀಡಬೇಕಿದೆ. ಬಿಜೆಪಿ ಮುಖಂಡ ದಿಲೀಪ್‌ ಘೋಷ್‌, ಹಂತಕರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರಿದವರು ಆಗಿರಬಹುದು ಎಂದು ಆರೋಪಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ರಾಜ್ಯಪಾಲ ಜಗದೀಪ ಧನಕರ್‌ ಸೂಕ್ತ ಕ್ರಮಕೈಗೊಳ್ಳುವಂತೆ ಬಂಗಾಳದ ಪೊಲೀಸರಿಗೆ ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಉದ್ದೇಶಪೂರ್ವಕ ಹಿಂಸಾಚಾರಗಳು ಕಡಿಮೆಯಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಸಂಸದ ಅರ್ಜುನ್‌ ಸಿಂಗ್‌ ಅವರ ಮನೆಯ ಹೊರಗೆ ಇಂದು ಬೆಳಿಗ್ಗೆ ಬಾಂಬ್‌ ಸ್ಫೋಟ ಆಗಿರುವುದು ಕಾನೂನು ಮತ್ತು ಸುವ್ಯವಸ್ಥೆಯ ಕುರಿತು ಚಿಂತೆಗೀಡು ಮಾಡಿದೆ. ಬಂಗಾಳದ ಪೊಲೀಸರಿಂದ ಸೂಕ್ತ ಕ್ರಮವನ್ನು ನಿರೀಕ್ಷಿಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ 3-4 ದಿನ ಮಳೆ ಬೀಳುವ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement