ಬೆಂಗಳೂರು: ಹಾಸ್ಯ ನಟ ದಿ. ಬುಲೆಟ್ ಪ್ರಕಾಶ ಅವರ ಮಗ ರಕ್ಷಕ್ ಅವರು ಮಂಗಳಮುಖಿಯರಿಂದ ದಾಳಿಗೆ ಒಳಗಾಗಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ತಮ್ಮ ಮೇಲೆ ಕೆಲವು ಮಂಗಳಮುಖಿಯರು ದಾಳಿ ನಡೆಸಿದ್ದಾರೆಂದು ರಕ್ಷಕ್ ಆರೋಪ ಮಾಡಿದ್ದಾರೆ.
ರಾತ್ರಿ 9 ಗಂಟೆಗೆ ಜಿಮ್ ಮುಗಿಸಿ ರಕ್ಷಕ್ ವಾಪಸಾಗುತ್ತಿದ್ದಾಗ, ಅವರ ಬ್ಯಾಗ್ ಅನ್ನು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್ನಿಂದ ಕೆಳಗೆ ಬಿದ್ದು ರಕ್ಷಕ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಬೈಕ್ ಸ್ಥಳದಲ್ಲಿಯೇ ಬಿಟ್ಟು ರಕ್ಷಕ್ ಓಡಿಹೋಗಿ, ಪೊಲೀಸರ ಸಹಾಯದಿಂದ ಅವರು ಬೈಕ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ (ಮಮಗಳವಾರ) ರಾತ್ರಿ 9 ಗಂಟೆಗೆ ಜಿಮ್ ಮುಗಿಸಿ ರಕ್ಷಕ್ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಹೆಬ್ಬಾಳ ಫ್ಲೈ ಓವರ್ ಬಳಿ ಘ ರಕ್ಷಕ್ ಬ್ಯಾಗ್ ಹಿಡಿದು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್ನಿಂದ ರಕ್ಷಕ್ ಕೆಳಗೆ ಬಿದ್ದಿದ್ದಾರೆ. ಕಾಲಿಗೆ ತರಚಿದ ಗಾಯಗಳಿದ್ದು, ಗಾಡಿಯೂ ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಂಗಳ ಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ಫ್ಲೈ ಓವರ್ ಮೇಲೆ ಗಾಡಿ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬಳಿಕ ಹೆಬ್ಬಾಳ ಪೊಲೀಸರ ಸಹಾಯದಿಂದ ಬೈಕ್ ತೆಗೆದುಕೊಂಡು ಮರಳಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ