ಆತ್ಮಗಳು ಅತೃಪ್ತಿಗೊಂಡು ಭಂಗವಾಗಿ ಕಾಡುತ್ತವೆ, ಅಫ್ಘಾನಿಸ್ತಾನದಿಂದ ಜಗತ್ತಿಗೇ ಭಯ: ಕೋಡಿಮಠದ ಶ್ರೀ ಭವಿಷ್ಯ

ಹಾಸನ: ‘ದೇಶದಲ್ಲಿ ಇನ್ನೂ ಮಳೆಯಾಗಲಿದೆ, ಆಪತ್ತು ಕಾಡಲಿದೆ. ಭೂಮಿ ನಡುಗಲಿದೆ, ರಾಜ ಭಯ ಇದೆ. ಆತ್ಮಗಳು ಭಂಗವಾಗಿ ಕಾಡುತ್ತವೆ. ಕಾರ್ತಿಕ ಮಾಸದವರೆಗೂ ಇದೇ ವಿಪತ್ತು ಮುಂದುವರಿಯಲಿದೆ’ ಎಂದು ಕೋಡಿಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಸ್ಚರ್ಣಗೌರಿ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಒಂದೂವರೆ ವರ್ಷದ ಹಿಂದೆ ದೇಶವೊಂದು ಭೂಪಟದಿಂದ ಕಾಣೆಯಾಗುವ ಭವಿಷ್ಯ ಹೇಳಿದ್ದೆ. ಈಗ ಅಫ್ಘಾನಿಸ್ತಾನ ಅಳಿಸಿ ಹೋಯಿತು ಎಂದು ಹೇಳಿದ ಅವರು, ಆ ಭಯ ಜಗತ್ತಿನಾದ್ಯಂತ ಇದೆ, ಅದು ಇನ್ನೂ ಹೆಚ್ಚಲಿದೆ. ಅಫ್ಘಾನಿಸ್ತಾನದಿಂದ ಇಡೀ ಜಗತ್ತಿಗೆ ಭಯ ಇದೆ ಎಂದು ಅವರು ಎಚ್ಚರಿಸಿದರು.
ಜಗತ್ತಿನಲ್ಲಿ ಕೊರೊನಾ ಇನ್ನೂ 2-3 ವರ್ಷ ಹೊಸ ರೂಪ ತಾಳುತ್ತ ಇರಲಿದೆ. ಆತ್ಮಗಳು ಭಂಗವಾಗಿ ಕಾಡುತ್ತವೆ. ಮುಂದಿನ ದಿನಗಳಲ್ಲಿ ಗಾಳಿಯಾಗಿ ಬೀಸಿ ಸಾವು ಹೆಚ್ಚಲಿದೆ. ನಿಧಾನವಾದರೂ ಈ ಅಲೆ ಇನ್ನೂ 2-3 ವರ್ಷ ಇರಲಿದೆ ಎಂದರು.
ಸರ್ಕಾರಕ್ಕೆ‌ ತೊಂದರೆ ಆಗುವುದಿಲ್ಲ, ಸರ್ಕಾರ ಸುಭದ್ರವಾಗಿರಲಿದೆ. ರಾಜ್ಯ ರಾಜಕೀಯದ ಹಿಂದೆ ಸೂತ್ರದಾರಿ ಇದ್ದಾರೆ. ಹೀಗಾಗಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಇದೇ ಸಂದರ್ಭದಲ್ಲಿ ಭವಿಷ್ಯ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement