ಕೊಟ್ಟಿಗೆಗೆ ಬೆಂಕಿ: 20 ಕುರಿಗಳ ಸಜೀಹ ದಹನ

ಮಳವಳ್ಳಿ: ಕುರಿಗಳ ಕೂಡಿ ಹಾಕಿದ್ದ ಕೊಟ್ಟಗೆಗೆ ಆಕಸ್ಮಿಕವಾಗಿ ಬೆಂಕೆ ತಗುಲಿದ ಪರಿಣಾಮ 20 ಕುರಿಗಳು ಸಜೀಹ ದಹನವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಸಿದ್ದಪ್ಪ ಎಂಬುವರಿಗೆ ಸೇರಿದ ಈ ಕುರಿಗಳನ್ನು ರಾತ್ರಿ ಕೊಟ್ಟಿಗೆಯಲ್ಲಿ ಕೂಡಿ ಹಾಕಲಾಗಿತ್ತು. ಆದರೆ ತಡರಾತ್ರಿ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ 20 ಕುರಿಗಳು ಸಜೀವ ದಹನವಾಗಿವೆ ಎಂದು ಅವರು ತಿಳಿಸಿದ್ದಾರೆ. ಕುರಿಗಳ ಸಾವಿನಿಂದ ಕಂಗಾಲಾದ ಅವರು ಪರಿಹಾರ ನೀಡುವಂತೆ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement