ಬೆಳೆ ಉಳಿಸುವಂತೆ ಕೋರಿ ಗಣೇಶನಿಗೆ ಜೀವಂತ ಇಲಿ ಸಮರ್ಪಿಸಿದ ಭಕ್ತ..!

ಚಿಕ್ಕಮಗಳೂರು: ಗಣಪತಿ ಹಬ್ಬದಂದು ರೈತನೊಬ್ಬ ಜೀವಂತ ಇಲಿಯನ್ನು ಗಣೇಶನಿಗೆ ನೀಡಿ, ಬೆಳೆಗಳನ್ನು ಉಳಿಸು ಎಂದು ಬೇಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮರ್ಕಲ್ ಗ್ರಾಮದ ರೈತ ನಿತಿನ್ ಎಂಬವರ ಹೊಲದಲ್ಲಿ ಇಲಿಗಳ ಕಾಟ ಯತೇಚ್ಛವಾಗಿತ್ತು. ಏನೇ ಮಾಡಿದರೂ ಇಲಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ ಇದರಿಂದ ಮನನೊಂದ ರೈತ ಬೆಳೆಗಳನ್ನ ಉಳಿಸಿಕೊಳ್ಳುವುದೇ ಕಷ್ಟವಾಗುತ್ತಿದೆ ಎಂದು ಗಣಪತಿ ಹಬ್ಬವಾದ ಶುಕ್ರವಾರ, ತಮ್ಮ ಹೊಲದಲ್ಲಿ ಜೀವಂತ ಇಲಿಯನ್ನು ಹಿಡಿದು ಗ್ರಾಮದಲ್ಲಿ ಕೂರಿಸಿದ್ದ ಗಣೇಶನಿಗೆ ಸಮರ್ಪಿಸಿ ಬೆಳೆ ಉಳಿಸು ಎಂದು ಬೇಡಿಕೊಂಡಿದ್ದಾನೆ ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.
ತಮ್ಮ ಹೊಲದಲ್ಲಿ ಹಿಡಿದ ಗಣೇಶನನ್ನ ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಕೊಂಡು ಬಂದು ಗಣೇಶನ ಮುಂದೆ ಇಟ್ಟಿದ್ದಾನೆ. ಸುಮಾರು ಒಂದು ಗಂಟೆಗಳ ಕಾಲ ಪ್ಲಾಸ್ಟಿಕ್ ಕವರ್ ನಲ್ಲಿ ಬಂಧಿಯಾಗಿದ್ದ ಮೂಷಿಕ ಕೆಳಗೆ ಬಿಡುತ್ತಿದ್ದಂತೆ ಓಡಿ ಹೋಗಿದೆ ಎಂದು ವರದಿ ಹೇಳಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement