ರಸ್ತೆ ಅಪಘಾತ: ಚಿರಂಜೀವಿ ಸೋದರಳಿಯ, ಟಾಲಿವುಡ್ ನಟ ಸಾಯಿ ಧರಮ್ ತೇಜಗೆ ಗಂಭೀರ ಗಾಯ

ಹೈದರಾಬಾದ್: ಟಾಲಿವುಡ್ ನಟ, ಮೆಗಾಸ್ಟಾರ್ ಚಿರಂಜೀವಿ ಸೋದರಳಿಯ ಸಾಯಿ ಧರಮ್ ತೇಜ್ ರಸ್ತೆ ಅಪಘಾತದಲಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಯಿ ಧರಮ್ ತೇಜ್ ಎದೆ, ಹೊಟ್ಟೆ, ಬಲಗಣ್ಣು ಭಾಗಕ್ಕೆ ತೀವ್ರವಾದ ಪೆಟ್ಟಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಈ ನಡುವೆ ಆಸ್ಪತ್ರೆಗೆ ಭೇಟಿ ನೀಡಿರುವ ನಟ ಪವನ್ ಕಲ್ಯಾಣ್, ಸಾಯಿ ಧರಮ್ ತೇಜ್ ಆರೋಗ್ಯದ ಮಾಹಿತಿ ಪಡೆದಿದ್ದಾಗಿ ತಿಳಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೂ ಹೆದರುವಂಥದ್ದೇನಿಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ನಟ ಚಿರಂಜೀವಿ ಕೂಡ ಟ್ವೀಟ್ ಮೂಲಕ ಸಾಯಿ ಧರಮ್ ತೇಜಗೆ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ತಡರಾತ್ರಿ ಹೈದರಾಬಾದ್ ನ ದುರ್ಗಮ್ ಚೆರುವು ಕೇಬಲ್ ಬ್ರಿಡ್ಜ್ ಬಳಿ ಸಾಯಿ ಧರಮ್ ತೇಜ್ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣ ಅಪೋಲೋ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement