ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅವರ ಒಂದು ಫೋಟೊಕ್ಕೆ ನೆಟ್ಟಗರು ಛೇಡಿಸುತ್ತಿದ್ದಾರೆ. ಇದಕ್ಕೆ ಕಾರಣ ಆ ಫೋಟೋ ನೀಡುವ ಸಂದೇಶ.
ಆ ಫೋಟದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗಿಡವೊಂದನ್ನು ನೆಟ್ಟು, ಅದಕ್ಕೆ ನೀರು ಹಾಕುತ್ತಿದ್ದಾರೆ. ಇದರಲ್ಲೇಣು ಆಶ್ವರ್ಯ ಎಂದು ಕೇಳಬೇಡಿ.. ಅಚ್ಚರಿ ಇರುವುದೇ ಇಲ್ಲಿ. ಹೀಗಾಗಿಯೇ ಫೋಟೋ ವೈರಲ್ ಆದ ಬೆನ್ನಲ್ಲೇ ಸಿಕ್ಕಾಪಟ್ಟೆ ಟ್ರೋಲ್ ಆಗಲು ಶುರುವಾಗಿದೆ.
ಶಿವರಾಜ್ ಸಿಂಗ್ ಚೌಹಾಣ್ ಎರಡು ದೊಡ್ಡ ಮಾರ್ಬಲ್ ಟೈಲ್ಸ್ ಮೇಲೆ ನಿಂತಿದ್ದಾರೆ. ಬಗ್ಗಿ ಒಂದು ಗಿಡಕ್ಕೆ ನೀರು ಹಾಕುತ್ತಿದ್ದಾರೆ. ಅವರ ಪಕ್ಕದಲ್ಲಿ ನಿಂತ ಅವರ ಸಹಾಯಕ ಅವರಿಗೆ ಛತ್ರಿ ಹಿಡಿದಿದ್ದಾರೆ. ಯಾಕೆಂದರೆ ಅಲ್ಲಿ ಮಳೆ ಸುರಿಯುತ್ತಿತ್ತು. ಅಂಥ ಮಳೆಯಲ್ಲಿ, ಕೊಡೆ ಹಿಡಿದು ಗಿಡಕ್ಕೆ ನೀರು ಹಾಕಿದ್ದೇ ಈ ಟ್ರೋಲ್ಗೆ ಕಾರಣ. ಸಾಮಾನ್ಯ ಜನರಷ್ಟೇ ಅಲ್ಲದೆ ಕಾಂಗ್ರೆಸ್ ಕೂಡ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಇದಕ್ಕೆ ಅಪಹಾಸ್ಯ ಮಾಡಿದೆ. ಕಳೆದ ಶುಕ್ರವಾರ ನೆಟ್ಟಿಗರೊಬ್ಬರು ಈ ಫೋಟೋ ಶೇರ್ ಮಾಡಿಕೊಂಡು..ನಮ್ಮದೇ ಸ್ಟೈಲು..ನಮ್ಮದೇ ರೀತಿ ಎಂದು ಕ್ಯಾಪ್ಷನ್ ಬರೆದಿದ್ದಾರೆ. ಕೆಲವೇ ಹೊತ್ತಲ್ಲಿ ಫೋಟೋ ಭಾರೀ ವೈರಲ್ ಆಗಿದೆ.
ಗಿಡ ನೆಡಲು ಅಷ್ಟು ದುಬಾರಿ ಬೆಲೆಯ ಮಾರ್ಬಲ್ ಕಲ್ಲು ಹಾಕಿ ನಿಲ್ಲಬೇಕಾ? ಅಂಥ ಮಳೆ ಬರುತ್ತಿದ್ದಾಗಲೂ ಸಸಿಗೆ ನೀರು ಹಾಕಬೇಕಾ? ಎಂಬಿತ್ಯಾದಿ ಪ್ರಶ್ನೆಗಳನ್ನು ನೆಟ್ಟಿಗರು ಎತ್ತಿದ್ದಾರೆ. ಕಾಂಗ್ರೆಸ್ ಕೂಡ ಶಿವರಾಜ್ ಸಿಂಗ್ ಚೌಹಾಣ್ರನ್ನು ತುಂಬ ಟೀಕಿಸಿದೆ. ಮಣ್ಣಿನ ಮಗ, ರೈತನ ಮಗ ಎಂದು ಅಪಹಾಸ್ಯ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್ ಮಾಧ್ಯಮ ಕೋ ಆರ್ಡಿನೇಟರ್ ನರೇಂದ್ರ ಸಲುಜಾ ಈ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದು, ಛತ್ರಿ, ಮಳೆ, ಕ್ಯಾಮರಾ ಮತ್ತು ಆ್ಯಕ್ಷನ್ ಎಂದು ಒಬ್ಬರು ಕಾಮೆಂಟ್ ಬರೆದಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ