ತಾಯಿಯಿಂದ ಬೇರೆಯಾದ ಎರಡು ಚಿರತೆ ಮರಿಗಳ ರಕ್ಷಣೆ

ಮೈಸೂರು: ತಾಯಿಯಿಂದ ಬೇರ್ಪಟ್ಟ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಲಾಗಿದೆ.
ಮೈಸೂರು ತಾಲೂಕಿನ ದಾರಿಪುರ ಗ್ರಾಮದ ರೈತ ಮಹದೇವಪ್ಪ ಅವರ ಜಮೀನಿನಲ್ಲಿ ಚಿರತೆ ಮರಿಗಳು ಪತ್ತೆಯಾಗಿತ್ತು, ಅವುಗಳನ್ನು ಈಗ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಎರಡು ಚಿರತೆ ಮರಿ ಸಿಕ್ಕ ನಂತರ ಅರಣ್ಯ ಇಲಾಖೆ ಸಿಬ್ಬಂದು ಎರಡು ದಿನಗಳ ಕಾಲ ಅಲ್ಲೇ ಬಿಟ್ಟು ತಾಯಿ ಚಿರತೆ ಬಂದು ಮರಿಗಳನ್ನು ಕರೆದುಕೊಂಡು ಹೋಗಬಹುದೆಂದು ಗಮಿಸಿದ್ದಾರೆ. ಆದರೆ ಅರಣ್ಯ ಸಿಬ್ಬಂದಿ ನಿರೀಕ್ಷೆ ಹುಸಿಯಾಗಿದೆ. ತಾಯಿ ಚಿರತೆ ಬಾರದ ಕಾರಣ ಚಿರತೆ ಮರಿಗಳ ಸಂರಕ್ಷಣೆ ಮಾಡಲಾಗಿದ್ದು, ಮರಿಗಳಿಗೆ ಮೈಸೂರು ಮೃಗಾಲಯದಲ್ಲಿ ಪ್ರಾಥಮಿಕ‌ ಚಿಕಿತ್ಸೆ ನೀಡಲಾಗಿದೆ. ನಂತರ ಬನ್ನೇರುಘಟ್ಟ ವನ್ಯಧಾಮಕ್ಕೆ ಚಿರತೆ ಮರಿಗಳನ್ನು ಕಳುಹಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ನಿಮ್ಮ ಕಾಮೆಂಟ್ ಬರೆಯಿರಿ

advertisement