ಧಾರವಾಡ: ರಸ್ತೆಯಲ್ಲಿಯೇ ಮಹಿಳೆ ಕೈಹಿಡಿದು ಎಳೆದಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯನ್ನ ಎಳೆದಾಡಿದ್ದ ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳನನ್ನು ಪೊಲೀಸರು ಬಂಧಿಸಿದ್ದಾರೆ.
ಎರಡು ದಿನಗಳ ಹಿಂದೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ಸತ್ತೂರಿನ ಬಡಾವಣೆಯಲ್ಲಿ ಶ್ರೀಕಾಂತ ಜಮನಾಳ ಮಹಿಳೆಯ ಕೈಹಿಡಿದು ಎಳೆದಾಡಿ ದರ್ಪ ಮೆರೆದಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಮಹಿಳೆ ವಿದ್ಯಾಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಘಟನೆಯ ವಿಡಿಯೋ ವೈರಲ್ ಆದ ಬಳಿಕ ಆರೋಪಿ ಶ್ರೀಕಾಂತ ಜಮನಾಳ ಪರಾರಿಯಾಗಿದ್ದ. ಮೊಬೈಲ್ ಸ್ವಿಚ್ ಆಫ್ ಆಗಿತ್ತು ಆದರೆ ಸವದತ್ತಿ ತಾಲೂಕಿನ ಪೊಲೀಸರುಬಂಧಿಸಿದ್ದಾರೆ. ಪೊಲೀಸರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ