ಕೋಲ್ಕತ್ತಾ: ಕೋಲ್ಕತ್ತಾ ಸಮೀಪದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಮೇಲೆ ಮಂಗಳವಾರ ಮತ್ತೊಮ್ಮೆ ಬಾಂಬ್ ದಾಳಿ ನಡೆಸಲಾಗಿದೆ.
ಮೊದಲ ಘಟನೆ ನಡೆದು ಒಂದು ವಾರದ ನಂತರ ಮತ್ತೆ ಈ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ 8;30 ರ ಸುಮಾರಿಗೆ ಅವರ ಮನೆಯ ಹಿಂಭಾಗದಲ್ಲಿ ಕಚ್ಚಾ ಬಾಂಬ್ ಎಸೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಂಸದ ಅರ್ಜುನ್ ಸಿಂಗ್, “ಅಪರಾಧಿಗಳು ಮುಕ್ತವಾಗಿ ನಮ್ಮ ಮನೆಯ ಮೇಲೆ ಬಾಂಬ್ ದಾಳಿ ಮಾಡಿ ತಿರುಗಾಡುತ್ತಿದ್ದಾರೆ, ಆದರೆ ಪೊಲೀಸರು ತೃಣಮೂಲ ಕಾಂಗ್ರೆಸ್ ಪಕ್ಷದ ದಲ್ಲಾಳಿಗಳಾಗಿ ವರ್ತಿಸುತ್ತಿದ್ದಾರೆ. ಆದರೆ ಅಂತಹ ದಾಳಿಗಳಿಗೆ ನಾನು ಹೆದರುವುದಿಲ್ಲ ಎಂದು ತಿಳಿಸಿದ್ದಾರೆ.
ಬಂಗಾಳದ ಉತ್ತರ 24 ಪರಗಣ (North 24 Parganas) ಜಿಲ್ಲೆಯ ಜಗತ್ತಾಲ್ನಲ್ಲಿರುವ ಅರ್ಜುನ್ ಸಿಂಗ್ ಅವರ ನಿವಾಸದ ಮೇಲೆ ಈ ಮೊದಲು ನಡೆದ ಬಾಂಬ್ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೋಮವಾರ ವಹಿಸಿಕೊಂಡಿದೆ. ಬಾಂಬ್ ದಾಳಿಯ ವೇಳೆ ಯಾರಿಗೂ ಗಾಯವಾಗದಿದ್ದರೂ, ಸ್ಫೋಟದಿಂದಾಗಿ ಮನೆಯ ಕಬ್ಬಿಣದ ಗೇಟ್ಗಳಿಗೆ ಹಾನಿಯಾಗಿದೆ. ಘಟನೆ ನಡೆದಾಗ ಸಂಸದರು ಅವರ ಮನೆಯಲ್ಲಿ ಇರಲಿಲ್ಲ. ಆದರೆ ಅವರ ಕುಟುಂಬದ ಸದಸ್ಯರು ಒಳಗೆ ಇದ್ದರು.
ನಿಮ್ಮ ಕಾಮೆಂಟ್ ಬರೆಯಿರಿ