ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ನಿರಾಸೆ: ವರ್ಗಾವಣೆ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆಎಟಿ) ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.
ಸೆ.8ರಂದು ಕೆಎಟಿ 2020-21ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಈ ಸಂಬಂಧ ಸೆ.14ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಲಾಗಿದೆ.
ಕಳೆದ ವರ್ಷ ಹೆಚ್ಚುವರಿ ಮತ್ತು ಕಡ್ಡಾಯವಾಗಿ ವರ್ಗಾವಣೆಗೊಂಡ ಶಿಕ್ಷಕರಿಗೆ ಸೆ.15ರಿಂದ ಕೌನ್ಸೆಲಿಂಗ್ ಆರಂಭವಾಗಬೇಕಾಗಿತ್ತು. ಆದರೆ, ಕೆಎಟಿನಲ್ಲಿ ತಡೆಯಾಜ್ಞೆ ಹಿನ್ನೆಲೆಯಲ್ಲಿ ಮತ್ತೆ ಮುಂದೂಡಲ್ಪಟ್ಟಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement