ಕುಮಟಾ: ಬೈಕ್ ಅಪಘಾತದಲ್ಲಿ ಪಿಡಿಒ ಸಾವು

ಕುಮಟಾ : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಗ್ರಾಮ ಪಂಚಾಯತ ಪಿ‌ಡಿಒ ಒಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ದುಂಡಕುಳಿ ಸಮೀಪ ನಡೆದಿದೆ ಎಂದು ವರದಿಯಾಗಿದೆ.
ಹೊನ್ನಾವರ ತಾಲೂಕಿನ ಇಡಗುಂಜಿ ಗ್ರಾಮ ಪಂಚಾಯತ್ ಪಿಡಿಒ ಪ್ರಶಾಂತ ಕೃಷ್ಣ ಶೆಟ್ಟಿ ಎಂಬವರೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಜಿಲ್ಲಾ ಕೇಂದ್ರ ಕಾರವಾರದಲ್ಲಿ ನಡೆಯಲಿದ್ದ ಕಂಪ್ಯೂಟರ್ ಪರೀಕ್ಷೆಗೆ ಹಾಜರಾಗಲು ಬೈಕ್ ನಲ್ಲಿ ಹೊನ್ನಾವರದಿಂದ ಕಾರವಾರಕ್ಕೆ ಹೋಗುತ್ತಿರುವಾಗ, ಬೈಕ್ ಸ್ಕಿಡ್ ಆಗಿಯೋ ಏನೋ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.ಆದರೆ ಪ್ರಯೋಜನವಾಗಲಿಲ್ಲ ಎಂದು ಹೇಳಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement