ಯಲ್ಲಾಪುರ: ತುಡುಗುಣಿಯಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ತುಡುಗುಣಿಯಲ್ಲಿ ಮಹಿಳೆಯೊಬ್ಬಳನ್ನು ಗುರುವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ಕೊಲೆಯಾದವರನ್ನು ಸರೋಜಾ ಅಶೋಕ ನಾಯರ್ (೪೫) ಎಂದು ಗುರುತಿಸಲಾಗಿದೆ. ಶಿರಸಿ ಕೆರೆಕೊಪ್ಪದ ಹಾಲಿ ಗೋವಾ ಮಾಪ್ಸಾದ ನಿವಾಸಿ ಕೃಷ್ಣ  ನಾಯ್ಕ (೪೬) ಕೊಲೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಸರೋಜಾ ನಾಯರ್ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಆರೋಪಿ  ಸರೋಜಾ ಅವರ ತಂಗಿಯನ್ನು ಗುರಿಯಾಗಿಸಿಕೊಂಡು ಬಂದಿದ್ದ ಎನ್ನಲಾಗಿದೆ. ಮನೆಯಲ್ಲಿ ಸರೋಜಾ ಅವರ ತಾಯಿ ಮತ್ತು ತಂಗಿ ಬೆಳಿಗ್ಗೆಯೇ ಎಲ್ಲೋ ಹೋಗಿದ್ದರು. ಈ ವೇಳೆಗೆ ಮನೆಗೆ ಬಂದಿದ್ದ ಈತ ಸರೋಜಾ ಅವರ ಜೊತೆ ಮಾತಿನ ಚಕಮಕಿ ನಡೆಸಿ, ಸಿಟ್ಟಿಗೆದ್ದು ಚಾಕುವಿನಿಂದ ಹೊಟ್ಟೆಗೆ ತಿವಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಸರೋಜಾ ಅವರ ತಂಗಿಯ ಮಗ ಅಕ್ಷಯ ನಾಯರರನ್ನು ಹೆದರಿಸಿ, ತನ್ನ ಜೊತೆ ಕರೆದೊಯ್ದಿದ್ದಾನೆ.  ಪರಿಚಯವಿದ್ದವ ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಯಲ್ಲಾಪುರ ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement