ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 783 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕಳೆದ ಎರಡು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿದೆ.ರಾಜ್ಯದಲ್ಲಿ ಇಂದು (ಭಾನುವಾರ) 783 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,139 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 16 ಮಂದಿ ಸೋಂಕಿನಿಂದಲೇ ಮೃತಪಟ್ಟಿದ್ದಾರೆ.
ಈವರೆಗೂ 37,603 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 29,67,866ಕ್ಕೆ ಏರಿಕೆಯಾಗಿದೆ. ಒಟ್ಟು 29,14,852 ಸೋಂಕಿತರು ಗುಣಮುಖರಾಗಿದ್ದು. 15,383 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.60ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.04ರಷ್ಟಿದೆ.
ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಯಲ್ಲಿ 267 ಮಂದಿಗೆ ಹೊಸದಾಗಿ ಕೊವಿಡ್-19 ಸೋಂಕು ತಗುಲಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1243480ಕ್ಕೆ ಏರಿಕೆಯಾಗಿದೆ. 7 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 16089ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7474 ಸಕ್ರಿಯ ಪ್ರಕರಣಗಳಿವೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ:
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 9 ಬೆಂಗಳೂರು 267, ಬೀದರ್ 1, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 36, ಚಿತ್ರದುರ್ಗ 13, ದಕ್ಷಿಣ ಕನ್ನಡ 97, ದಾವಣಗೆರೆ 6, ಧಾರವಾಡ 2, ಗದಗ 3, ಹಾಸನ 34, ಹಾವೇರಿ 1, ಕಲಬುರಗಿ 3, ಕೊಡಗು 41, ಕೋಲಾರ 2, ಕೊಪ್ಪಳ 0, ಮಂಡ್ಯ 13, ಮೈಸೂರು 69, ರಾಯಚೂರು 0, ರಾಮನಗರ 0, ಶಿವಮೊಗ್ಗ 28, ತುಮಕೂರು 23, ಉಡುಪಿ 82, ಉತ್ತರ ಕನ್ನಡ 29, ವಿಜಯಪುರ 1, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement