ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ, ಬಿಜೆಪಿ ನಾಯಕರನ್ನು ಸಂಪರ್ಕಿಸುತ್ತಿದೆ, ಎಚ್ಚೆತ್ತುಕೊಳ್ಳಿ; ಯಡಿಯೂರಪ್ಪ

ದಾವಣಗೆರೆ: ಚುನಾವಣೆಗಳು ಬರುತ್ತಿವೆ. ಹೀಗಾಗಿ ಪ್ರತಿಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ವಿರೋಧ ಪಕ್ಷಗಳು ತಂತ್ರಗಾರಿಕೆ ಮಾಡುತ್ತಿದ್ದು, ಬಿಜೆಪಿ ಮುಖಂಡರನ್ನು ಸೆಳೆಯರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ದಾವಣಗೆರೆಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿದೆ. ಹೀಗಾಗಿ ನಮ್ಮ ಸಂಘಟನೆ, ಶ್ರಮ, ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ. ನಮಗೆ ಕೇಂದ್ರದ ಲೋಕಸಭಾ ಚುನಾವಣೆ ಕಷ್ಟವಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ಹೀಗಾಗಿ 140 ಸ್ಥಾನಗಳನ್ನು ಗೆಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು ಎಂದು ಹೇಳಿದ್ದಾರೆ.
ಪಕ್ಷ ಸಂಘಟನೆಗೆ ಯಡಿಯೂರಪ್ಪ ಪ್ರವಾಸಕ್ಕೆ ಒಬ್ಬನೇ ಹೋಗುವ ಪರಿಸ್ಥಿತಿ ಇನ್ನೂ ಬಂದಿಲ್ಲ. ನಾನು ಪ್ರವಾಸಕ್ಕೆ ಹೊರಟರೆ ಶಾಸಕರು, ಸಂಸದರು, ಕಾರ್ಯಕರ್ತರು ಎಲ್ಲರೂ ಬರ್ತಾರೆ. ನಾನು ಒಬ್ಬನೇ ಪ್ರವಾಸ ಹೊರಡುವ ಸ್ಥಿತಿ ಬಂದಿಲ್ಲ. ವಿಧಾನಸಭೆಯಲ್ಲಿ ಒಬ್ಬರೇ ಇದ್ದಾಗಲೂ ಹಿಂತಿರುಗಿ ನೋಡಲಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸಿದ ಪರಿಣಾಮವಾಗಿ ಇಂದು ನಾವು ಅಧಿಕಾರದಲ್ಲಿ ಇದ್ದೇವೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ನಮಗೆ ಸಿಕ್ಕಿದ್ದು ನಮ್ಮ ಸೌಭಾಗ್ಯ. ನರೇಂದ್ರ ಮೋದಿ ಯುಗ ಉತ್ಸವ ಕಾರ್ಯಕ್ರಮವನ್ನು ರಾಮದಾಸ್ ಮೈಸೂರಿನಲ್ಲಿ ಅರ್ಥಪೂರ್ಣವಾಗಿ ನಡೆಸಿದ್ದರು. ಇದೇ ತರದ ಕಾರ್ಯಕ್ರಮಗಳನ್ನು ರಾಜ್ಯದ ಉದ್ದಗಲಕ್ಕೂ ನಡೆಸಬೇಕು. ಒಂದು ತಿಂಗಳ ಕಾಲ ನಿರಂತರ ಪ್ರವಾಸ ಮಾಡಿ ಸಂಘಟನೆ ಬಲ ಪಡಿಸಬೇಕು ಎಂದು ಹೇಳಿದರು.
ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗದ ಮುಖಂಡರನ್ನು ಬಲಪಡಿಸಬೇಕು. ಈಗಿನಿಂದಲೇ ಸಂಘಟನೆ ಮಾಡಲು ಕಾರ್ಯತತ್ಪರರಾಗಬೇಕು. ರಾಜ್ಯದ ಚುನಾವಣೆ ಸುಲಭವಿಲ್ಲ. ಹಾನಗಲ್, ಸಿಂಧಗಿ ಉಪ ಚುನಾವಣೆ ಸುಲಭವಿಲ್ಲ. ದೇವಸ್ಥಾನ ಕೆಡವಿದ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವುದೇ ಕಾರಣಕ್ಕೆ ಮಂದಿರ ಒಡೆಯಲು ಅವಕಾಶ ಕೊಡುವುದಿಲ್ಲ. ಈಗ ಇರುವ ಆದೇಶದ ಬಗ್ಗೆ ಸುಪ್ರಿಂ ಕೋರ್ಟ್ ಗೆ ಮೊರೆ ಹೋಗಲು ನಿರ್ಧರಿಸಿದ್ದೇವೆ ಎಂದ ಅವರು, ಕಾರ್ಯಕರ್ತರು ಯಾರೂ ಮನಸ್ಸಿಗೆ ನೋವು ಮಾಡಿಕೊಳ್ಳುವುದು ಬೇಡ. ಮುಂದಿನ ವರ್ಷ ಚುನಾವಣೆ ವರ್ಷವಾಗಿರುವುದರಿಂದ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement