ಹೆಸರಾಂತ ಕಬಡ್ಡಿ ಆಟಗಾರ ಭಟ್ಕಳದ ಮನೋಜ ನಾಯ್ಕ ನಿಧನ

ಭಟ್ಕಳ: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ (31) ಅವರು ಮಂಗಳವಾರ ಕುಂದಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಭಟ್ಕಳದಿಂದ ಕುಂದಾಪುರಕ್ಕೆ ಹೋಗಿದ್ದ ಇವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಭಟ್ಕಳದ ಪರಶುರಾಮ ತಂಡದಲ್ಲಿಯ ಉತ್ತಮ ಆಟಗಾರರಲ್ಲಿ ಓರ್ವರಾದ ಇವರು ತಮ್ಮ ಉತ್ತಮ ಆಟದಿಂದ ಎಂತಹ ಎದುರಾಳಿ ತಂಡವನ್ನಾದರೂ ಮಣಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದರು. ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಹೆಸರು ಮಾಡಿದ್ದರು. ಪರಶುರಾಮ ಭಟ್ಕಳ ತಂಡದ ಕಬ್ಬಡ್ಡಿ ಆಟಗಾರನಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದ ಮನೋಜ ನಾಯ್ಕ ಹತ್ತು ಹಲವಾರು ಟೂರ್ನಿಗಳಲ್ಲಿ ಟ್ರೋಫಿ ಗೆಲ್ಲಲು ತನ್ನ ಆಟದಿಂದ ನೆರವಾಗಿದ್ದರು.
ಸಂತಾಪ: ಉತ್ತಮ ಕಬಡ್ಡಿ ಆಟಗಾರ ಮನೋಜ ನಾಯ್ಕ ಇವರ ಅಕಾಲಿಕ ನಿದನಕ್ಕೆ ಶಾಸಕ ಸುನಿಲ್ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ  ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement