ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹುಣಸೂರು ವನ್ಯಜೀವಿ ವಲಯದ ಸಾಕಾನೆ ಶಿಬಿರದಲ್ಲಿ ಜೆಮಿನಿ ಸರ್ಕಸ್ ಕಂಪನಿಯಿಂದ ವಶಪಡಿಸಿಕೊಂಡ ೪ ಆನೆಗಳಲ್ಲಿ ಒಂದಾದ ಹೆಣ್ಣು ಆನೆಯೊಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ.
೬೬ ವರ್ಷ ಪ್ರಾಯದ ಹೆಣ್ಣಾನೆಯನ್ನು ಪುನರ್ವಸತಿಗೊಂಡ ದೊಡ್ಡಹರವೆ ಸಾಕಾನೆ ಶಿಬಿರದಲ್ಲಿ ಅರಣ್ಯ ರಕ್ಷಣಾ ಕಾರ್ಯಕ್ಕೆ ಬಳಸಿಕೊಂಡು ಪಾಲನೆ ಮಾಡಲಾಗುತ್ತಿತ್ತು. ಕಳೆದ ೨ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದೆ.
ಸ್ಥಳಕ್ಕೆ ಹಿರಿಯ ಆಧಿಕಾರಿಗಳಾದ ಡಿಸಿಎಫ್ ಡಿ.ಮಹೇಶ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳಾದ ಹನುಮಂತರಾಜು ಇತರರು ಭೇಟಿ ನೀಡಿದ್ದರು. ಪಶು ವೈದ್ಯಾಧಿಕಾರಿಗಳಾದ ವಾಸಿಂ ಮಿರ್ಜಾ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು.
ನಿಮ್ಮ ಕಾಮೆಂಟ್ ಬರೆಯಿರಿ