ಕಾಶ್ಮೀರ: ಬಂಡಿಪೋರಾ ಎನ್‌ಕೌಂಟರ್‌ನಲ್ಲಿ ಬಿಜೆಪಿ ಮುಖಂಡನ ಹತ್ಯೆಯಲ್ಲಿ ಭಾಗಿಯಾದ ಭಯೋತ್ಪಾದಕ ಸೇರಿ ಇಬ್ಬರು ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾನುವಾರ ನಡೆದ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಹೊಡೆದುಳಿಸಲಾಗಿದೆ. ಅವರಲ್ಲಿ ಒಬ್ಬ ಭಯೋತ್ಪಾದಕ ಬಿಜೆಪಿ ಮುಖಂಡ ವಸೀಂ ಬ್ಯಾರಿ ಮತ್ತು ಅವರ ಕುಟುಂಬ ಸದಸ್ಯರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ವರದಿಯಾಗಿದೆ.
ಭದ್ರತಾ ಪಡೆಗಳು ಉತ್ತರ ಕಾಶ್ಮೀರದ ಬಂಡಿಪೋರಾದ ವಾಟ್ರಿನಾ ಪ್ರದೇಶದಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಬದಲಾಯಿತು ಎಂದು ಅವರು ಹೇಳಿದರು.
ಎನ್‍ಕೌಂಟರಿನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಎನ್‍ಕೌಂಟರ್ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಒಳಗೊಂಡಂತೆ ಅಪರಾಧಕ್ಕೆ ಬಳಸಲಾಗುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಂತರ ದೃಢಪಡಿಸಿದರು.
ಎನ್ ಕೌಂಟರ್ ನಲ್ಲಿ ಬಿಜೆಪಿ ಮುಖಂಡ ದಿವಂಗತ ವಸೀಂ ಬ್ಯಾರಿ, ಆತನ ತಂದೆ ಮತ್ತು ಸಹೋದರನ ಕೊಲೆಗಾರ ಹತನಾಗಿದ್ದಾನೆ”ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ. ಬ್ಯಾರಿ ಮತ್ತು ಅವರ ಕುಟುಂಬ ಸದಸ್ಯರು 2020 ರಲ್ಲಿ ಕೊಲ್ಲಲ್ಪಟ್ಟರು.
ಬಾಬರ್ ಅಲಿ ಎಂಬ ಪಾಕಿಸ್ತಾನಿ ಭಯೋತ್ಪಾದಕನನ್ನು ಬಂಡಿಪೋರಾದ ಛಂದಜಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿದ ಒಂದು ತಿಂಗಳ ನಂತರ ಈ ಎನ್ಕೌಂಟರ್ ನಡೆದಿದೆ.

ಪ್ರಮುಖ ಸುದ್ದಿ :-   ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement