ದೆಹಲಿ ನ್ಯಾಯಾಲಯದಲ್ಲಿ ಶೂಟೌಟ್ ಪ್ರಕರಣ: ಇಬ್ಬರ ಬಂಧನ

ನವದೆಹಲಿ: ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದ್ದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಇಬ್ಬರನ್ನು ದೆಹಲಿ ಪೊಲೀಸ್ ವಿಶೇಷ ತಂಡ ಬಂಧಿಸಿದೆ. ದೆಹಲಿ ಪಶ್ಚಿಮದ ನಿವಾಸಿಗಳಾದ ಉಮಂಗ್ ಮತ್ತು ವಿನಯ್ ಬಂಧಿತ ಅರೋಪಿಗಳಾಗಿದ್ದಾರೆ. ಹಲವರಿಗಾಗಿ ಇನ್ನೂ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಾಯರ್ ಬಟ್ಟೆ ಧರಿಸಿ ನ್ಯಾಯಾಲಯದೊಳಗೆ ನುಗ್ಗಿದ್ದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು.ಈ ವೇಳೆ ಭದ್ರತೆಯಲ್ಲಿದ್ದ ಪೊಲೀಸರು ಅವರನ್ನು ಗುಂಡು ಹಾರಿಸಿ ಕೊಂದಿದ್ದಾರೆ.
ಈ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮೃತಪಟ್ಟಿದ್ದರು. ಜಿತೇಂದರ್ ಮತ್ತು ಟಿಲು ಗ್ಯಾಂಗ್ ನಡುವೆ ಕಳೆದ ಹಲವು ವರ್ಷಗಳಿಂದ ಗಲಾಟೆ ನಡೆಯುತ್ತಿದ್ದು, ಇತ್ತೀಚೆಗೆ ಅವರ ಕೈಗೆ ಬಂದೂಕು ಬಂದಿದೆ. ಎರಡೂ ಗ್ಯಾಂಗ್‍ಗಳ ನಡುವಿನ ಹೊಡೆದಾಟದಲ್ಲಿ ಈವರೆಗೆ ಸುಮಾರು 25 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯಾಯಾಲಯದೊಳಗೆ ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಡೆಪ್ಯುಟಿ ಕಮಿಷನರ್ ರಾಕೇಶ್ ತಿಳಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement