ಕರ್ನಾಟಕದ 4 ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕಲಿಕೆ

ಬೆಂಗಳೂರು: ಕರ್ನಾಟಕದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಕಲಿಕೆ ಆರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್‌ ಬೋಧನೆ ಆರಂಭಿಸಲಾಗುವುದು. ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ವಿಜಯಪುರದ ಬಿಎಲ್ ಡಿಇ ಕಾಲೇಜು, ಚಿಕ್ಕಬಳ್ಳಾಪುರದ ಎಸ್.ಜೆ.ಆರ್ ಕಾಲೇಜು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪ್ರಾರಂಭ ಮಾಡಲಾಗುತ್ತದೆ. ಈಗಾಗಲೇ ಕನ್ನಡದಲ್ಲಿ ಪಠ್ಯ ಪುಸ್ತಕ ಹೊರತರಲು ಸಿದ್ಧತೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ವರ್ಷ ೨೦,೦೦೦ ರೂ.ಗಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ. ಇತರೆ ಶುಲ್ಕಗಳ ಮಿತಿ ೨೦ ಸಾವಿರ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement