ಪಾಟಿ ಸವಾಲಿನ ವೇಳೆ ಸಂತ್ರಸ್ತೆ ಮುಂದೆ ಅತ್ಯಾಚಾರ ಕೃತ್ಯದ ಇಂಚಿಂಚೂ ವಿವರ: ವಿಚಾರಣಾ ನ್ಯಾಯಾಲಯದ ಬಗ್ಗೆ ಬಾಂಬೆ ಹೈಕೋರ್ಟ್ ತೀವ್ರ ಅಸಮಾಧಾನ

ಮುಂಬೈ: ವಿಚಾರಣಾ ನ್ಯಾಯಾಲಯವೊಂದರಲ್ಲಿ ಪಾಟಿ ಸವಾಲಿನ ವೇಳೆ ಪ್ರತಿವಾದಿ ಪರ ವಕೀಲರು ಅತ್ಯಾಚಾರ ಕೃತ್ಯದ ಇಂಚಿಂಚೂ ವಿವರಗಳನ್ನು ಸಂತ್ರಸ್ತೆಯ ಮುಂದೆ ಸಲಹೆಯ ಹೆಸರಿನಲ್ಲಿ ನಡೆಸಿರುವುದು ಬಾಂಬೆ ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ. ಸಂತ್ರಸ್ತೆಗೆ ಕೇಳಲಾದ ಪ್ರಶ್ನೆಗಳು ಸೂಕ್ತ ರೀತಿಯ ಪಾಟಿ ಸವಾಲು ಎಂದು ಕರೆಸಿಕೊಳ್ಳುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಸಾಧನಾ ಎಸ್ ಜಾಧವ್ ಮತ್ತು ಎಸ್. ವಿ. ಕೊತ್ವಾಲ್ … Continued

ಭಾರತದ ಅಗ್ರ 10 ಶ್ರೀಮಂತರಲ್ಲಿ ಮುಕೇಶ ಅಂಬಾನಿ ನಂ.1, ಗೌತಮ ಅದಾನಿ ನಂ.2 : ದೇಶದ 10 ಶ್ರೀಮಂತರ ಒಂದು ದಿನದ ಆದಾಯ ಎಷ್ಟು ಗೊತ್ತೆ..?

ಐಐಎಫ್ಎಲ್ ವೆಲ್ತ್ ಹುರುನ್ ಇಂಡಿಯಾ ರಿಚ್ ಲಿಸ್ಟ್ 2021 ರ ಪ್ರಕಾರ ಮುಕೇಶ್ ಅಂಬಾನಿ ಸತತ 10 ನೇ ವರ್ಷವೂ 7,18,000 ಕೋಟಿ ಸಂಪತ್ತಿನೊಂದಿಗೆ ಸತತ 10 ನೇ ವರ್ಷವೂ ಮುಖೇಶ್ ಅಂಬಾನಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಮುಂದುವರಿದಿದ್ದಾರೆ. ಮುಖೇಶ್ ಅಂಬಾನಿಯ 2020-21 ರಲ್ಲಿ ಶೇ.9 ರಷ್ಟು ಏರಿಕೆಯಾಗಿದ್ದು, 7,18,000 ಕೋಟಿ ರೂಪಾಯಿಗೆ ಏರಿಕೆಯಾಗಿದೆ. … Continued

ಸುಳ್ಳು ವದಂತಿ ನಂಬದಿರಿ; ಚಿರತೆ ಕಂಡುಬಂದಲ್ಲಿ ತಕ್ಷಣ ಸ್ಥಳೀಯ ಗ್ರಾಪಂ, ಅರಣ್ಯ ಇಲಾಖೆಗೆ ತಿಳಿಸಿ

ಹುಬ್ಬಳ್ಳಿ: ಹುಬ್ಬಳ್ಳಿಯ ಗುಡಿಸಾಗರ, ಬೂದನಗುಡ್ಡ, ಅಂಚಟಗೇರಿ ಸೇರಿದಂತೆ ಇತರ ಭಾಗದಲ್ಲಿ ಇಲ್ಲಿಯವರೆಗೆ ಮತ್ತು ನಿನ್ನೆ ದಿನ ಸಹ ಚಿರತೆ ಕಂಡುಬಂದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಬಂದಿಲ್ಲ ಎಂದು ಡಿಎಫ್‌ಒ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ. ಆದಾಗ್ಯೂ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಆ ಭಾಗದಲ್ಲಿ ನಿರಂತರ ಪರಿಶೀಲನೆ, ಗಸ್ತು ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. … Continued

ವಿದ್ಯಾರ್ಥಿಗಳಿಗೆ ಬಸ್‌ಪಾಸ್‌: ಸೇವಾ-ಸಿಂಧು ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಎನ್‌ಡಬ್ಲ್ಯೂಕೆಆರ್ಟಿಸಿ ಎಂಡಿ ಸೂಚನೆ

ಹುಬ್ಬಳ್ಳಿ: ಶಾಲಾ ಕಾಲೇಜುಗಳು ಹಂತ, ಹಂತವಾಗಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿದಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ವಿತರಿಸುತ್ತಿದೆ. ಈ ಕುರಿತು ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಲಾಗಿದ್ದು, ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಪಾಸ್ ಕೌಂಟರ್‌ಗಳಿಂದ ಬಸ್ ಪಾಸ್ ಪಡೆಯಲು ಸಂಸ್ಥೆಯ ವ್ಯವಸ್ಥಾಪಕ … Continued

ಶಾಹೀನ್‌ ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲೂ ಅಕ್ಟೋಬರ್ 1ರಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಗುಲಾಬ್​ ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಗೆ ಕಾರಣವಾದ ಗುಲಾಬ್ ಚಂಡಮಾರು ಅರಬ್ಬೀ ಸಮುದ್ರದಲ್ಲಿ ದುರ್ಬಲಗೊಂಡ ನಂತರ ಮತ್ತೆ ಮರುಜನ್ಮ ಪಡೆದು ಶಾಹೀನ್​ ಚಂಡಮಾರುತ( Cyclone Shaheen)ವಾಗಿ ಅಕ್ಟೋಬರ್ 1ರಂದು ವಿಶೇಷವಾಗಿ ಗುಜರಾತ್‌ ಹಾಗೂ ಉತ್ತರ ಮಹಾರಾಷ್ಟ್ರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. … Continued

ಬೆಂಗಳೂರಿಗೆ ಬಂತು ಮೊದಲ ಎಲೆಕ್ಟ್ರಿಕ್ ಬಸ್, ಸಾರಿಗೆ ಸಚಿವರ ಸಂಚಾರ

ಬೆಂಗಳೂರು: ಕರ್ನಾಟಕಕ್ಕೆ ಮೊದಲ ಎಲೆಕ್ಟ್ರಿಕ್ ಬಸ್ ಬೆಂಗಳೂರು ನಗರಕ್ಕೆ ಬಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 90 ಮಿನಿ ಬಸ್‌ಗಳನ್ನು ಓಡಿಸಲು ಬಿಎಂಟಿಸಿ ಮುಂದಾಗಿದೆ. ಜೆಬಿಎಂ ಕಂಪನಿಯಿಂದ ಬಿಎಂಟಿಸಿ ಗುತ್ತಿಗೆ(ಜಿಸಿಸಿ) ಆಧಾರದಲ್ಲಿ ಬಸ್ ಪಡೆದುಕೊಳ್ಳುತ್ತಿದೆ. ಎನ್ ಟಿಪಿಸಿ ಸಹಯೋಗದಲ್ಲಿ ಸೇವೆ ಒದಗಿಸಲು ಒಪ್ಪಂದ ‌ಮಾಡಿಕೊಳ್ಳಲಾಗಿದೆ. ಬೆಂಗಳೂರಿಗೆ ಬಂದ ಮೊದಲ ಬಸ್ಸಿನ ಪರೀಕ್ಷಾರ್ಥ ಸಂಚಾರವನ್ನು ಬಿಎಂಟಿಸಿಯ ಕೆಂಗೇರಿ ಘಟಕದೊಳಗೇ‌ … Continued

ಮಕ್ಕಳಲ್ಲಿ ಏಕತಾ ಮನೋಭಾವ ಬೆಳೆಯಲಿ: ಡಾ.ಅಜಿತ ಪ್ರಸಾದ

ಧಾರವಾಡ: ಮಕ್ಕಳ ಮನಸ್ಸು ದ್ವೇಷ, ಅಸೂಯೆ, ಕೀಳರಿಮೆ ಇಲ್ಲದೆ ಮೃದುವಾದದ್ದು. ಅದಕ್ಕೆ ನಾವು ಯಾವ ರೀತಿಯ ಪೋಷಣೆ ನೀಡುತ್ತೇವೆಯೋ ಆ ರೀತಿ ಮಕ್ಕಳು ಬೆಳೆಯುತ್ತಾರೆ. ಸಮಾಜದಲ್ಲಿ ಮೇಲು ಕೀಳು ಎನ್ನದೆ ಸಮವಾಗಿ ಬದುಕಿದಾಗ ಮಾತ್ರ ಬದುಕಿಗೊಂದು ಅರ್ಥ ಬರುತ್ತದೆ ಎಂದು ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಜೆ.ಎಸ್.ಎಸ್ ಶ್ರೀ … Continued

ನಾನು ಬಿಜೆಪಿ ಸೇರುವುದಿಲ್ಲ, ಆದರೆ ಕಾಂಗ್ರೆಸ್ಸಿನಲ್ಲಿಯೂ ಉಳಿಯುವುದಿಲ್ಲ: ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌

ನವದೆಹಲಿ: ನಾನು ಬಿಜೆಪಿಗೆ ಸೇರುತ್ತಿಲ್ಲ, ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೇನೆ ಎಂದು ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಹೇಳಿದ್ದಾರೆ. ಚುನಾವಣೆಗೆ ನಾಲ್ಕು ತಿಂಗಳಿರುವಾಗ, ಪಂಜಾಬ್ ಮುಖ್ಯಮಂತ್ರಿಯಿಂದ ರಾಜೀನಾಮೆ ನೀಡಬೇಕಾಗಿ ಬಂದ ನಂತರದ ಪರಿಸ್ಥಿತಿ ಬಗ್ಗೆ ಅವರು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಇಲ್ಲಿಯವರೆಗೆ ನಾನು ಕಾಂಗ್ರೆಸ್‌ನಲ್ಲಿದ್ದೇನೆ ಆದರೆ ನಾನು ಕಾಂಗ್ರೆಸ್‌ನಲ್ಲಿ ಉಳಿಯುವುದಿಲ್ಲ. ನನ್ನನ್ನು … Continued

ಡೆತ್‌ನೋಟ್‍ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸಿನೆಮಾ-ಕಿರುತೆರೆ ನಟಿ

ಬೆಂಗಳೂರು: ಕನ್ನಡ ಕಿರುತೆರೆಗಳಲ್ಲಿ ನಟಿಸುತ್ತಿದ್ದ ನಟಿ ಸೌಜನ್ಯ ಇಂದು (ಗುರುವಾರ) ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಸನ್ ವರ್ತ್​ ಅಪಾರ್ಟ್​ಮೆಂಟ್​ನಲ್ಲಿ ಕಿರುತೆರೆ ನಟಿ ಸೌಜನ್ಯ (25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ನಟಿ ಸೌಜನ್ಯ(25) ಇಂದು ಬೆಳಗ್ಗೆ ಪಿಎಗೆ ತಿಂಡಿ ತರಲು … Continued

ನವಜೋತ್ ಸಿಧು -ಪಂಜಾಬ್ ಸಿಎಂ ಮಧ್ಯಾಹ್ನ 3 ಗಂಟೆಗೆ ಭೇಟಿ: ಯಾವುದೇ ಚರ್ಚೆಗೆ ಸಿದ್ಧ ಎಂದ ಸಿಧು

ನವದೆಹಲಿ: ಪಂಜಾಬ್‌ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಡೆದ ಇತ್ತೀಚಿನ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯನ್ನು ಭೇಟಿಯಾಗಲು ಒಪ್ಪಿಕೊಂಡಿರುವುದಾಗಿ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಮಾತುಕತೆಗೆ ಆಹ್ವಾನಿಸಿರುವ ಪಂಜಾಬ್‌ ಮುಖ್ಯಮಂತ್ರಿ ನವಜೋತ್‌ ಸಿಂಗ್‌ ಸಿಧು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಗುರುವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಸಿಧು … Continued