ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತ ಕಂಡಿದ್ದ ಚಿರತೆ- ಕವಲಗೇರಿ ಗ್ರಾಮದಲ್ಲಿ ಸೆರೆ ಸಿಕ್ಕ ಚಿರತೆ ಒಂದೆ: ಡಿಎನ್ಎ ಪರೀಕ್ಷೆಯಿಂದ ದೃಢ

ಧಾರವಾಡ: ಹುಬ್ಬಳ್ಳಿ ನೃಪತುಂಗಬೆಟ್ಟ, ರಾಜನಗರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ ಹಾಗೂ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಸೆರೆ ಹಿಡಿಯಲಾಗಿದ್ದ ಚಿರತೆ ಒಂದೇ ಎಂದು ಡಿಎನ್ಎ ವರದಿಯಲ್ಲಿ ದೃಢಪಟ್ಟಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇಂದು ಚಿರತೆಯ ಡಿಎನ್‌ಎ ವರದಿ ಬಂದಿದೆ ಅವರು ತಿಳಿಸಿದ್ದಾರೆ. ಚಿರತೆ ಆರಂಭದಲ್ಲಿ ಹುಬ್ಬಳ್ಳಿ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಕಟ್ಟಡದಲ್ಲಿ ವಾಸವಾಗಿತ್ತು. ನಂತರ ಅದು ಬಹುಶಃ ಅಮರಗೋಳ, ಗೋವನಕೋಪ್ಪ ಮಾರ್ಗವಾಗಿ ಕವಲಗೇರಿ ಗ್ರಾಮದ ಕಬ್ಬಿನಗದ್ದೆಗಳಿಗೆ ಹೋಗಿರಬಹುದು ಎಂಬ ಅಭಿಪ್ರಾಯ ಪಡಲಾಗಿತ್ತು. ಅದರಂತೆ ಎರಡು ಚಿರತೆ ಒಂದೇ ಅಥವಾ ಬೇರೆ ಬೇರೆ ಎಂಬುದನ್ನು‌ ಖಾತ್ರಿಪಡಿಸಿಕೊಳ್ಳಲು ಎರಡು ಕಡೆಯಲ್ಲಿ ಸಂಗ್ರಹಿಸಲಾಗಿದ್ದ ಚಿರತೆ ಲದ್ದಿ(ಮಲ)ಯನ್ನು ಡಿಎನ್ಎ ಪರೀಕ್ಷೆಗಾಗಿ ಹೈದ್ರಾಬಾದ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
ಅದರ ವರದಿ ಇಂದು (ಅಕ್ಟೋಬರ್‌ 1) ಅರಣ್ಯ ಇಲಾಖೆಗೆ ತಲುಪಿದ್ದು, ಎರಡು ಕಡೆ ಕಂಡುಬಂದಿದ್ದ ಚಿರತೆ ಒಂದೆ ಆಗಿದೆ ಎಂದು ಡಿಎಫ್‌ಒ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement