ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಯ ಕತ್ತು ಸೀಳಿದ ಭಗ್ನ ಪ್ರೇಮಿ..!

ಕೊಟ್ಟಾಯಂ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಯುವಕ ವಿದ್ಯಾರ್ಥನಿಯೋರ್ವಳ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಕೇರಳದ ಕೊಟ್ಟಾಯಂನ ಪಾಲಾದ ಕಾಲೇಜು ಆವರಣದಲ್ಲಿ ನಡೆದ ಬಗ್ಗೆ ವರದಿಯಾಗಿದೆ
ನಿತಿನಾ ಮೋಲ್ ( 21) ಎಂಬುವವಳೇ ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ನಿತಿನಾಮೋಲ್ ಪಾಲಾದಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆ ಬರೆದು ಎಕ್ಸಾಂ ಹಾಲ್‍ನಿಂದ ಹೊರಬರುವಾಗ ಎದುರು ಬಂದ ಅಭಿಷೇಕ್ ಬೈಜು ( (21) ಎಂಬ ಯುವಕ ಚಾಕುವಿನಿಂದ ಆಕೆಯ ಕುತ್ತಿಗೆ ಕೊಯ್ದಿದ್ದಾನೆ. ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ಅಭಿಷೇಕ್‍ನನ್ನು ಪೊಲೀಸರು ಬಂಧಿಸಿದ್ದಾರೆ.
ಅಭಿಷೇಕ್ ಹಾಗೂ ನಿತಿನಾಮೋಲ್ ಕ್ಲಾಸ್‍ಮೇಟ್‍ಗಳಾಗಿದ್ದು, ಆತನ ಆಕೆಯನ್ನು ಪ್ರೀತಿಸುತ್ತಿದ್ದೆ ಎಂದು ಹೇಳೊಕೊಂಡಿದ್ದ. ಆದರೆ ನಿತಿನಾ ಮೋಲ್‌ ಆತನ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡಿದ್ದ ಅಭಿಷೇಕ್ ಇಂದು ಪರೀಕ್ಷೆ ಮುಗಿಸಿ ಬಂದ ವಿದ್ಯಾರ್ಥಿನಿ ನಿತಿನಾ ಮೋಲ್‌ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ. ಕೆಳಗೆ ಬಿದ್ದ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯುತ್ತಿದ್ದುದರಿಂದ ಘಟನೆ ನಡೆದಾಗ ಕೆಲವು ವಿದ್ಯಾರ್ಥಿಗಳು ಮಾತ್ರ ಹೊರಗೆ ಇದ್ದರು. ಉಳಿದವರು ಪರೀಕ್ಷೆ ಬರೆಯುತ್ತಿದ್ದರು ಎನ್ನಲಾಗಿದೆ. ಅಭಿಷೇಕ್ ಪರೀಕ್ಷೆ ಬರೆದು ಬೇಗನೆ ಹೊರಗೆ ಹೋಗಿದ್ದ. ನಿತಿನಾ ಮೋಲ್ ಬರುವುದನ್ನೇ ಕಾಯುತ್ತಿದ್ದು ಆಕೆ ಹೊರಗೆ ಬಂದ ತಕ್ಷಣ ಕೊಲೆ ಮಾಡಿದ್ದಾನೆ. ಸೆಕ್ಯುರಿಟಿ ಸಿಬ್ಬಂದಿ ಕೆಳಗೆ ಬಿದ್ದಿದ್ದ ನಿತಿನಾಮೋಲ್‍ಳನ್ನು ಮೊದಲು ನೋಡಿದ್ದು, ಜೋರಾಗಿ ಕಿರುಚಾಡಿದ್ದಾರೆ. ಆಗ ಆಕೆಯ ಸ್ನೇಹಿತರು ಹಾಗೂ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement