ನಟಿ ಸವಿ ಮಾದಪ್ಪ (ಸೌಜನ್ಯ) ಸಾವಿನ ಪ್ರಕರಣ: ನಟ, ಪಿಎ ವಿರುದ್ಧ ದೂರು ದಾಖಲು

ಬೆಂಗಳೂರು: ನಟಿ ಸವಿ ಮಾದಪ್ಪ (ಸೌಜನ್ಯ ) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ವಿವೇಕ್ ಹಾಗೂ ಮಹೇಶ್ ವಿರುದ್ಧ ನಟಿಯ ತಂದೆ ಪ್ರಭುಮಾದಪ್ಪ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ನನ್ನ ಮಗಳ ಸಾವಿಗೆ ನಟ ವಿವೇಕ್ ಹಾಗೂ ಮಹೇಶ್ ಕಿರುಕುಳವೇ ಕಾರಣ ಎಂದು ಆರೋಪ ಮಾಡಿದ್ದಾರೆ.
ನಟಿಯ ತಂದೆ ಪ್ರಭು ಮಾದಪ್ಪ ನೀಡಿದ ದೂರಿನ ಆಧಾರದ ಮೇಲೆ ಕುಂಬಳಗೋಡು ಪೊಲೀಸರು ಐಪಿಸಿ ಸೆಕ್ಷನ್ 306(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನನ್ನ ಮಗಳ ಸಾವಿಗೆ ನಟ ವಿವೇಕ್ ಹಾಗೂ ಮಹೇಶ್ ಕಿರುಕುಳವೇ ಕಾರಣ. ನನ್ನ ಮಗಳು ಸೌಜನ್ಯ ಮಾದಪ್ಪ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸುವ ಸಲುವಾಗಿ 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು. ಒಂದು ವರ್ಷದ ಹಿಂದೆ ಕುಂಬಳಗೋಡು ಬಳಿಯ ಸನ್ವರ್ಥ್ ಅಪಾರ್ಟ್‍ಮೆಂಟ್ ನಲ್ಲಿ ವಾಸವಾಗಿದ್ದಳು.ಈ ವೇಳೆ ನನ್ನ ಮಗಳು ಸೌಜನ್ಯಾಳಿಗೆ ವಿವೇಕ್ ಎಂಬುವನ ಪರಿಚಯವಾಗಿತ್ತು. ವಿವೇಕ್ ನನ್ನ ಮಗಳನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಪೀಡಿಸುತ್ತಿದ್ದ. ಈ ವಿಚಾರವನ್ನು ಮಗಳು ಸೌಜನ್ಯ, ನನ್ನ ಪತ್ನಿ ರೇಣುಕಾಳಿಗೆ ತಿಳಿಸಿದ್ದಳು. ಸೆಪ್ಟೆಂಬರ್ 30ರಂದು ವಿವೇಕ್ ನನ್ನ ಪತ್ನಿ ರೇಣುಕಾಗೆ ಬೆಳಗ್ಗೆ 9ಕ್ಕೆ ಫೋನ್ ಮಾಡಿದ್ದ. ಇದಾದ ಕೆಲವೇ ಸಮಯದ ನಂತರ ನನ್ನ ದೊಡ್ಡ ಮಗಳು ಭಾಗ್ಯಶ್ರೀ ಕರೆಮಾಡಿ, ಸವಿ ಸತ್ತು ಹೋಗಿದ್ದಾಳೆ ಎಂದು ತಿಳಿಸಿದ್ದಾಳೆ. ನನ್ನ ಮಗಳ ಸಾವಿಗೆ ವಿವೇಕ್ ಹಾಗೂ ಅವಳ ಸಹಾಯಕನಾಗಿದ್ದ ಮಹೇಶ್ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ, ನನ್ನ ಮಗಳ ಬಳಿ 6 ಲಕ್ಷ ರೂ. ಹಣವಿತ್ತು. ಎರಡು ದಿನಗಳ ಹಿಂದೆ 1 ಲಕ್ಷ ರೂ.ಗಳನ್ನು ಕಳುಹಿಸಿದ್ದೆ. ನನ್ನ ಮಗಳ ಜೊತೆಯಲ್ಲಿದ್ದ ವಿವೇಕ್ ಹಾಗೂ ಮಹೇಶ್ ಕಿರುಕುಳ ತಾಳಲಾರದೆ ಸೆಪ್ಟೆಂಬರ್ 30ರಂದು 10:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೀಗಾಗಿ ವಿವೇಕ್ ಹಾಗೂ ಮಹೇಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಟಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ಕುಂಬಳಗೋಡು ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ
ಈ ಹಿನ್ನೆಲೆಯಲ್ಲಿ ಸೌಜನ್ಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪಿಎ ಮಹೇಶ್​ನನ್ನ ಕುಂಬಳಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೌಜನ್ಯ ತಂದೆ ದೂರಿನನ್ವಯ ವಶಕ್ಕೆ ಪಡೆದಿರುವ ಪೊಲೀಸರು ಮಹೇಶ್​ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement