ಭ್ರಷ್ಟಾಚಾರ ಪ್ರಕರಣ; ಮುಂಬೈ ಮಾಜಿ ಪೊಲೀಸ್ ಕಮಿಷನರ್ ವಿರುದ್ಧ ಲುಕ್‌ಔಟ್ ನೋಟಿಸ್..!

ಮುಂಬೈ; ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ದೇಶವನ್ನು ತೊರೆದಿರುವ ಮಾಹಿತಿ ಹಿನ್ನೆಲೆಯಲ್ಲಿ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ.
ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಪರಮ್‌ ಬೀರ್‌ ಸಿಂಗ್ ದೇಶವನ್ನು ತೊರೆದಿರುವ ಬಗ್ಗೆ ಮಾಹಿತಿ ಬಂದಿದೆ. ಆದರೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ” ಎಂದು ಅವರು ಹೇಳಿದರು.
ಅವರು ಸರ್ಕಾರಿ ಅಧಿಕಾರಿಯಾಗಿರುವುದರಿಂದ, ವಿದೇಶ ಪ್ರವಾಸಕ್ಕೆ ನಿರ್ಬಂಧಗಳಿವೆ. ಸರ್ಕಾರದ ಅನುಮತಿಯಿಲ್ಲದೆ ಅವರು ದೇಶವನ್ನು ತೊರೆಯಲು ಸಾಧ್ಯವಿಲ್ಲ. ಆದರೂ ಅವರು ಹೊರಟಿದ್ದರೆ ಅದು ಒಳ್ಳೆಯ ಕ್ರಮವಲ್ಲ ಎಂದು ಎಂದು ವಾಲ್ಸೆ ಪಾಟೀಲ್ ಹೇಳಿದರು.
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಲಂಚದ ಆರೋಪ ಹೊರಿಸಿದ ಸಿಂಗ್ ಅವರನ್ನು ಹುಡುಕಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಹೇಳಿದರು.
ಹಿರಿಯ ಐಪಿಎಸ್ ಅಧಿಕಾರಿ ಒರಮ್‌ ಬೀರ್‌ ಸಿಂಗ್‌ ಅವರು ಅನಿಲ ದೇಶಮುಖ್ ವಿರುದ್ಧ ಮಾಡಿರುವ ಆರೋಪಗಳ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ.
ಮುಂಬೈ ಪೊಲೀಸ್ ಕಮಿಷನರ್ ಆಗಿ ಹೊರಹಾಕಲ್ಪಟ್ಟ ಮತ್ತು ಈ ವರ್ಷದ ಮಾರ್ಚ್‌ನಲ್ಲಿ ಗೃಹ ರಕ್ಷಕಕ ವಿಭಾಗಕ್ಕೆ ವರ್ಗಾವಣೆಯಾದ ಕೆಲವು ದಿನಗಳ ನಂತರ, ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಮಾಜಿ ಗೃಹ ಸಚಿವ ದೇಶಮುಖ್ ಮುಂಬೈನಲ್ಲಿ ರೆಸ್ಟೋರೆಂಟ್ ಮತ್ತು ಬಾರ್ ಮಾಲೀಕರಿಂದ ಹಣ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಹೇಳುತ್ತಿದ್ದರು ಎಂದು ಆರೋಪಿಸಿದ್ದರು.
ಸಿಂಗ್ ಅವರು ಮಾಡಿರುವ ಭ್ರಷ್ಟಾಚಾರ ಆರೋಪಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ (ನಿವೃತ್ತ) ಕೈಲಾಶ್ ಉತ್ತಮ್‌ಚಂದ್ ಚಂಡಿವಾಲ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿತ್ತು. ಆಯೋಗವು ತನ್ನ ಮುಂದೆ ಹಾಜರಾಗುವಂತೆ ಸಿಂಗ್‌ಗೆ ಅನೇಕ ಬಾರಿ ಸಮನ್ಸ್ ಜಾರಿ ಮಾಡಿತ್ತು, ಆದರೆ ಅವರು ಹಾಜರಾಗಿರಲಿಲ್ಲ. ಅದರ ನಂತರ, ಸಮಿತಿಯು ಅವರ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಅನ್ನು ಸಹ ಹೊರಡಿಸಿತು.
ಸಿಂಗ್ ಮೇಲೆ ಅನೇಕ ಸುಲಿಗೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ವರ್ಷ ಏಪ್ರಿಲ್‌ನಲ್ಲಿ ದಾಖಲಾದ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ ದೂರಿನ ಮೇರೆಗೆ ಅವರು ಪ್ರಕರಣವನ್ನು ಎದುರಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಚರಂಡಿಯಲ್ಲಿ ಬಿದ್ದಿದ್ದ ನಾಯಿಮರಿ ರಕ್ಷಿಸುವಾಗ ಕಚ್ಚಿ ಗಾಯ ; ನಿರ್ಲಕ್ಷ್ಯ ಮಾಡಿದ್ದಕ್ಕೆ ಖ್ಯಾತ ಕಬಡ್ಡಿ ಆಟಗಾರ ರೇಬೀಸ್ ನಿಂದ ಸಾವು...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement