ಕೋವಿಡ್ ಸಮಯದಲ್ಲಿ ಕೆಲಸ ಕಳೆದುಕೊಂಡ ಸಾಮಾಜಿಕ ಭದ್ರತಾ ಯೋಜನೆ ಸದಸ್ಯರಿಗೆ 3 ತಿಂಗಳ ವೇತನ ನೀಡಲಿದೆ ಕೇಂದ್ರ

ನವದೆಹಲಿ: ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡ ನೌಕರರ ರಾಜ್ಯ ವಿಮಾ ನಿಗಮದ(Employees’ State Insurance Corporation) ಸದಸ್ಯರಿಗೆ ಕೇಂದ್ರ ಸರ್ಕಾರ ಮೂರು ತಿಂಗಳ ವೇತನವನ್ನು ನೀಡುತ್ತದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ ಯಾದವ್ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಕೊರೊನಾದಿಂದ ಜೀವ ಕಳೆದುಕೊಂಡ ECSI ಸದಸ್ಯರ ಸಂಬಂಧಿಕರಿಗೆ ತಮ್ಮ ಸಚಿವಾಲಯವು ಆಜೀವ ಆರ್ಥಿಕ ಸಹಾಯವನ್ನು ನೀಡಲಿದೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿ ರಾಜ್ಯದಲ್ಲಿಯೂ ಕಾರ್ಮಿಕ ಸಂಹಿತೆ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೊಸ ಕಾರ್ಮಿಕ ಕಾನೂನನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಅನೇಕ ರಾಜ್ಯಗಳು ತಮ್ಮದೇ ಕಾನೂನುಗಳನ್ನು ಮಾಡಿಕೊಂಡಿವೆ. ಕಾರ್ಮಿಕರಿಗೆ ಸಂಬಂಧಿಸಿದ 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಕಾರ್ಮಿಕ ಸಂಹಿತೆಗಳೊಂದಿಗೆ ಬದಲಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇ-ಶ್ರಮ ಪೋರ್ಟಲ್ ಬಗ್ಗೆ ಮಾತನಾಡಿದ ಯಾದವ್ ಅವರು, ಸುಮಾರು 400 ಅನಧಿಕೃತ ಮಾರಾಟಗಾರರ ವರ್ಗಗಳನ್ನು ಮಾಡಲಾಗಿದೆ ಮತ್ತು ಯಾವುದೇ ಮಾರಾಟಗಾರರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.
ನಿರ್ಮಾಣ ಕ್ಷೇತ್ರ, ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತು ಗೃಹ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದಲ್ಲಿ 38 ಕೋಟಿ ಕಾರ್ಮಿಕರನ್ನು ನೋಂದಾಯಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಮಿಕರಿಗೆ 12 ವಿಶಿಷ್ಟ ಅಂಕಿಗಳಿರುವ ಇ-ಶ್ರಮ್ ಕಾರ್ಡ್ ನೀಡಲಾಗುತ್ತದೆ. ನಂತರ, ಈ ಕಾರ್ಡ್ ಮೂಲಕ, ಕಾರ್ಮಿಕರನ್ನು ಸಾಮಾಜಿಕ ಭದ್ರತೆಯ ಯೋಜನೆಗಳಲ್ಲಿ ಸೇರಿಸಲಾಗುವುದು. ಇಎಸ್‌ಐ ವ್ಯಾಪ್ತಿಯಲ್ಲಿ ಬರುವ ಉದ್ಯೋಗಿಗಳ ಇಎಸ್‌ಐ ಕಾರ್ಡ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗುತ್ತದೆ ಎಂದು ವಿವರಿಸಿದರು.
ಮುಂದಿನ ಹಂತದಲ್ಲಿ, ಒಂದು ರಾಷ್ಟ್ರ-ಒಂದು ಪಡಿತರ ಚೀಟಿಯ ಮಾದರಿಯಲ್ಲಿ ಒಂದು ರಾಷ್ಟ್ರ-ಒಂದು ಇಎಸ್‌ಐ ಕಾರ್ಡ್ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಇದರಿಂದ ಮುಂದಿನ ದಿನಗಳಲ್ಲಿ ಸಂಬಂಧಿತ ಉದ್ಯೋಗಿಗಳು ಇಎಸ್‌ಐ ಮತ್ತು ದೇಶದ ಯಾವುದೇ ಭಾಗದಲ್ಲಿರುವ ಅದರ ಸಂಯೋಜಿತ ಆಸ್ಪತ್ರೆಗಳಲ್ಲಿನ ಆರೋಗ್ಯ ಸೌಲಭ್ಯಗಳ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement