ಶಂಕಿತ ರೇಬಿಸ್​ಗೆ ಪಿಯುಸಿ ವಿದ್ಯಾರ್ಥಿನಿ ಸಾವು

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಶಂಕಿತ ರೇಬಿಸ್​ಗೆ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಕಡಬದ ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿನಿ ವಿನ್ಸಿ ಸಾರಮ್ಮ(17) ಮೃತ ವಿದ್ಯಾರ್ಥಿನಿ. ಆಲಂಕಾರು ಗ್ರಾಮದ ಕೆದಿಲ ನಿವಾಸಿ ವಿನ್ಸಿ ಸಾರಮ್ಮ, ವಿಪರೀತ ತಲೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಅಕ್ಟೋಬರ್​ 2) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
6 ತಿಂಗಳ ಹಿಂದೆ ರೇಬಿಸ್​ನಿಂದಾಗಿ ವಿನ್ಸಿ ಮನೆಯ ನಾಯಿ ಮೃತಪಟ್ಟಿತ್ತು. ಹೀಗಾಗಿ ವಿನ್ಸಿ ಸಾರಮ್ಮ ರೇಬಿಸ್ ವೈರಸ್ ತಗುಲಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ವಿದ್ಯಾರ್ಥಿನಿ ವಿನ್ಸಿ ಮೃತಪಟ್ಟಿದ್ದರ ಬಗ್ಗೆ ಮಾಹಿತಿ ತಿಳಿದ ಆರೋಗ್ಯ ಇಲಾಖೆ ಸಿಬ್ಬಂದಿ,. ವಿನ್ಸಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement