ಶ್ರೀರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸರ ಆರೋಗ್ಯ ಗಂಭೀರ

ಲಖನೌ: ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಲಖನೌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭಾನುವಾರ ಬೆಳಗ್ಗೆ ಏಕಾಏಕಿ ಆರೋಗ್ಯ ಬಿಗಡಾಯಿಸಿದ್ದು ಕೂಡಲೇ ಉತ್ತರಾಧಿಕಾರಿ ಕಮಲ ನಯನ ದಾಸ್, ಮಹಾಂತರನ್ನು ಆಸ್ಪತ್ರೆಗೆ ದಾಖಲಿಸಿದರು. ಅವರಿಗೆ ೮೩ ವರ್ಷ ವಯಸ್ಸಾಗಿದೆ. ಗೋಪಾಲದಾಸ್‌ಗೆ ಸೂಕ್ತ ಚಿಕಿತ್ಸೆ ನೀಡಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಂಬಂಧಪಟ್ಟ ವೈದ್ಯರಿಗೆ ಸೂಚಿಸಿದ್ದಾರೆ.
ಮಹಾಂತ ನೃತ್ಯ ಗೋಪಾಲದಾಸ್ ಅವರು ಕೆಮ್ಮು, ಅತಿ ಮೂತ್ರ ವಿಸರ್ಜನೆ ಮತ್ತು ಆಮ್ಲಜನಕ ಕೊರತೆಯಿಂದ ಬಳಲುತ್ತಿದ್ದಾರೆ.
ಮಹಾಂತ ನೃತ್ಯ ಗೋಪಾಲದಾಸ್ ಅವರಿಗೆ ೨೦೨೦ರ ಆಗಸ್ಟ್‌ನಲ್ಲಿ ಕೋವಿಡ್ ೧೯ ಸೋಂಕು ತಗುಲಿತ್ತು. ಆಗ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಗಸ್ಟ್ ೫ರ ರಾಮಮಂದಿರ ಭೂಮಿಪೂಜೆಯಂದು ಮಾತನಾಡಿದ್ದ ಮಹಾಂತ ಅವರು, ಶ್ರೀರಾಮಮಂದಿರ ನಿರ್ಮಾಣ ಆದಷ್ಟು ಬೇಗ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದ್ದರು.

ನಿಮ್ಮ ಕಾಮೆಂಟ್ ಬರೆಯಿರಿ

advertisement