ಅ.7ರಿಂದ ನಾಡಹಬ್ಬ ದಸರಾ ಮೈಸೂರು -ರಾಜ್ಯದ ಇತರ ಭಾಗಗಳಿಗೆ ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

ಬೆಂಗಳೂರು: ನಾಡಹಬ್ಬ ದಸರಾ ಆರಂಭಕ್ಕೆ ಎರಡೇ ದಿನ ಬಾಕಿ. ಸರ್ಕಾರದ ಮಟ್ಟದಲ್ಲಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಆಚರಣೆ ನಡೆಯಲಿದೆ. ಅಕ್ಟೋಬರ್ 7ರಂದು ಬೆಳಗ್ಗೆ ಉದ್ಘಾಟನೆಯಾದರೆ 15ರಂದು ವಿಜಯದಶಮಿಗೆ ಮುಕ್ತಾಯವಾಗಲಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಹಬ್ಬ ಆಚರಣೆಗೆ ಮೈಸೂರು ಮತ್ತು ರಾಜ್ಯದ ಬೇರೆ ಕಡೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ:
ಅಕ್ಟೋಬರ್ 7ರಂದು ಸಂಜೆ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ. ಮೈಸೂರು ದಸರಾ ಉದ್ಘಾಟನೆಗೆ 100 ಜನರಿಗೆ ಅವಕಾಶ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 400 ಜನರ ಮಿತಿ, ದಸರಾದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ 1 ಡೋಸ್​ ಲಸಿಕೆ ಪಡೆದಿರಬೇಕು, ಹೊರಗಿನಿಂದ ಬರುವವರಿಗೆ RTPCR ಟೆಸ್ಟ್ ಕಡ್ಡಾಯ ಎಂದು ಸರ್ಕಾರ ಸೂಚಿಸಿದೆ.
ಅರಮನೆ ಆವರಣದಲ್ಲಿ ದಸರಾ ನಡೆಯಬೇಕಾಗಿದ್ದು, ಜನರು ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು, ವರ್ಚುವಲ್ ಮೂಲಕ ಜಂಬೂ ಸವಾರಿಗೆ ವೀಕ್ಷಣೆ, ಕಾರ್ಯಕ್ರಮದಲ್ಲಿ 400ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಅಕ್ಟೋಬರ್ 15ರಂದು ನಡೆಯುವ ಜಂಬೂ/ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶವಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ, ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಸೂಚನೆ ಪಾಲಿಸಬೇಕು ಇತ್ಯಾದಿ ನಿಯಮಗಳು ಸರ್ಕಾರದ ಮಾರ್ಗಸೂಚಿಯಲ್ಲಿವೆ.
ಈ ಬಾರಿಯೂ ಸರಳ ದಸರಾ ಆಚರಣೆಗೆ ಅವಕಾಶವಿದ್ದು, ರಾಜ್ಯದ ಬೇರೆ ಕಡೆಗಳಲ್ಲಿ 400ಕ್ಕಿಂತ ಹೆಚ್ಚು ಜನರು ಒಮ್ಮೆಗೇ ಸೇರುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement