ಲಖಿಂಪುರ ಖೇರಿ ಹತ್ಯೆ ಪ್ರಕರಣ; ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾ ಬಂಧನ

ಲಕ್ನೋ: ಲಖಿಂಪುರ್ ಖೇರಿ ಹಿಂಸಾಚಾರದ ಪ್ರಾಥಮಿಕ ಆರೋಪಿ ಆಶಿಶ್ ಮಿಶ್ರಾ ಅವರನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುಮಾರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಶನಿವಾರ ಬಂಧಿಸಿದೆ. ಬಂಧನವನ್ನು ಎಸ್‌ಐಟಿ ಮುಖ್ಯಸ್ಥರಾಗಿರುವ ಉಪ ಇನ್ಸ್‌ಪೆಕ್ಟರ್ ಜನರಲ್ ಉಪೇಂದ್ರ ಅಗರ್ವಾಲ್ ದೃಢಪಡಿಸಿದ್ದಾರೆ. ಕೇಂದ್ರ ಗೃಹ ರಾಜ್ಯ ಮಂತ್ರಿ ಅಜಯ್ ಮಿಶ್ರಾ … Continued

ಕರ್ನಾಟಕದಾದ್ಯಂತ ಕೊರೊನಾ ಮಾರ್ಗಸೂಚಿ ವಿಸ್ತರಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಹುತೇಕ ನಿರ್ಬಂಧಗಳನ್ನು ಸಡಿಲಗೊಳಿಸಿರುವ ರಾಜ್ಯ ಸರ್ಕಾರ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಹೊಟೇಲ್‌, ರೆಸ್ಟೋರೆಂಟ್, ಚಿತ್ರಮಂದಿರ, ರಂಗಮಂದಿರ, ಪಬ್ ಸೇರಿ ಎಲ್ಲೆಡೆ ಶೇ.100ರಷ್ಟು ಅವಕಾಶ ಸೇರಿ ಎಲ್ಲವೂ ವಿಸ್ತರಣೆಯಾಗಲಿದೆ. ರಾಜ್ಯಾದ್ಯಂತ ಅ.25ರ ಬೆಳಗ್ಗೆ 6 ಗಂಟೆ ವರೆಗೆ ಹಾಲಿ ಮಾರ್ಗಸೂಚಿಗಳೇ … Continued

ಸರ್ಕಾರದ ಮಹತ್ವದ ನಿರ್ಧಾರ : 2021- 22ನೇ ಸಾಲಿಗೂ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆ:

ಬೆಂಗಳೂರು: ಕಳೆದ ಸಾಲಿನಲ್ಲಿ ಬೇರೆ ಬೇರೆ ವಿಶ್ವ ವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. 2021- 22ನೇ ಸಾಲಿಗೂ ಸೇವೆ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ … Continued

ತಮಗೆ ಆಹ್ವಾನ ನೀಡಿಲ್ಲವೆಂದು ಸಚಿವ ಶ್ರೀರಾಮುಲು ಕಾರು ಅಡ್ಡಗಟ್ಟಿ ಉದ್ಘಾಟನಾ ಕಾರ್ಯಕ್ರಮವನ್ನೇ ರದ್ದು ಮಾಡಿದ ಚಿಂಚನಸೂರ..!

ಸಚಿವ ಶ್ರೀರಾಮುಲು ಕಾರಿಗೆ ಅಡ್ಡಗಟ್ಟಿ ಕಾರ್ಯಕ್ರಮವನ್ನೇ ರದ್ದು ಮಾಡಿದ ಬಾಬುರಾವ್ ಚಿಂಚನಸೂರ ಯಾದಗಿರಿ : ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರ ಕಾರನ್ನು ಅಡ್ಡಗಟ್ಟಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ತಮಗೆ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ ಪರಿಣಾಮ ನಡೆಯಬೇಕಿದ್ದ ಏಕಲವ್ಯ ಶಾಲಾ ಉದ್ಘಾಟನೆ ಕಾರ್ಯಕ್ರಮ … Continued

ಎಬಿಪಿ- ಸಿ ವೋಟರ್‌ ಸಮೀಕ್ಷೆ: 2022ರ ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿಂದಿಕ್ಕಿದ ಆಮ್‌ ಆದ್ಮಿ ಪಾರ್ಟಿ

ಮುಂದಿನ ವರ್ಷ ಪಂಜಾಬ್ ರಾಜ್ಯ ಸಹ ವಿಧಾನಸಭಾ ಚುನಾವಣೆಗೆ ಹೋಗಲಿದೆ. ಕಾಂಗ್ರೆಸ್ ಪಕ್ಷಕ್ಕೆ ಈ ಸ್ಪರ್ಧೆಯು ನಿರ್ಣಾಯಕವಾಗಿದೆ ಏಕೆಂದರೆ ಪಂಜಾಬ್ ಕಾಂಗ್ರೆಸ್ಸಿನ ಉಳಿದಿರುವ ಕೆಲವೇ ಭದ್ರಕೋಟೆಗಳಲ್ಲಿ ಒಂದಾಗಿದೆ. ಎಬಿಪಿ ನ್ಯೂಸ್,ಸಿ ವೋಟರ್‌ ಸಹಭಾಗಿತ್ವದಲ್ಲಿ, ಚುನಾವಣೆಗೆ ಮುಂಚಿತವಾಗಿ ಪಂಜಾಬ್ ಜನರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಒಂದು ಸಮೀಕ್ಷೆಯನ್ನು ನಡೆಸಿತು. ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸಿದ್ದು ಕಂಡುಬಂದಿದ್ದು, ಆಮ್‌ ಆದ್ಮಿ … Continued

ಎಬಿಪಿ -ಸಿ ವೋಟರ್‌ ಸಮೀಕ್ಷೆ: 2022ರ ವಿಧಾನಸಭಾ ಚುನಾವಣೆಗಳಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರುವ ಸಾಧ್ಯತೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ 2022ರಲ್ಲಿ ಸಿ-ಮತದಾರರ ಸಮೀಕ್ಷೆ: ಅತ್ಯಂತ ಮಹತ್ವದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ, ಎಬಿಪಿ ನ್ಯೂಸ್ ಜೊತೆಗೆ ಸಿ-ವೋಟರ್ ಸಮೀಕ್ಷೆ ನಡೆಸಿದ್ದು, ರಾಜ್ಯದ ಮತದಾರರ ಮನಸ್ಥಿತಿ ಅರಿಯುವ ಪ್ರಯತ್ನ ಮಾಡಿದೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) … Continued

ನದಿಯಲ್ಲಿ ದೋಣಿ ಮಗುಚಿ 50 ಸಾವು; 60 ಪ್ರಯಾಣಿಕರು ನಾಪತ್ತೆ

ಮಂಗೋಲಾ: ಕಾಂಗೋದಲ್ಲಿ ದೋಣಿ ಮಗುಚಿ 50ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಹಾಗೂ 60 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಾಂಗೋ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಇದುವರೆಗೂ 51 ಶವಗಳನ್ನು ಹೊರಗೆ ತೆಗೆಯಲಾಗಿದೆ. ಸ್ಥಳೀಯರು ಮತ್ತು ಪ್ರಯಾಣಿಕರ ಮಾಹಿತಿ ಮೇರೆಗೆ ಇನ್ನೂ 60 ಜನ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. 39 ಜನರು ಸುರಕ್ಷಿತವಾಗಿದ್ದು, … Continued

ದಸರಾ ನಂತರ 1-5ನೇ ತರಗತಿ ಪ್ರಾರಂಭ: ನಾಗೇಶ

ಉಡುಪಿ: ರಾಜ್ಯದಲ್ಲಿ ೧ ರಿಂದ ೫ರ ವರೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ದಸರಾ ಹಬ್ಬದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರೂ ಕೂಡ ಸಹಮತಿ ವ್ಯಕ್ತಪಡಿಸಿದ್ದಾರೆ. … Continued

ಮೈಸೂರು ವಿವಿಯಲ್ಲಿ ಚಿನ್ನದ ಪದಕ ಪಡೆದ ಗೃಹಿಣಿಯ ಅನುಮಾನಾಸ್ಪದ ಸಾವು

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಚಿನ್ನದ ಪದಕ ಪಡೆದಿದ್ದ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಡೇನಹಳ್ಳಿಯ ಆಶಾ ಎಂಬುವವರು ಮೃತ ಗೃಹಿಣಿ. ಇವರು ಮಳವಳ್ಳಿಯ ನಾಗಾಪ್ರಸಾದ್ ಎಂಬುವವರನ್ನು ಪ್ರೀತಿಸಿ ಎಂಟು ವರ್ಷದ ಹಿಂದೆ ಮದುವೆಯಾಗಿದ್ದರು. ತವರು ಮನೆಯಿಂದ ಹಣ ತರುವಂತೆ ಗಂಡನಿಂದ ನಿರಂತರ ಕಿರುಕುಳವಾಗುತ್ತಿತ್ತು. … Continued

ಶ್ರೀರಂಗಪಟ್ಟಣ ದಸರಾ ವೇಳೆ ಪಟಾಕಿ ಸದ್ದಿಗೆ ಬೆಚ್ಚಿದ ಆನೆಗಳು: ಆನೆಗಳ ಅಂಬಾರಿ ಮೆರವಣಿಗೆ ರದ್ದು..ವೀಕ್ಷಿಸಿ

ಮಂಡ್ಯ: ಶ್ರೀರಂಗಪಟ್ಟಣ ದಸರಾ ಜಂಬೂಸವಾರಿ ವೇಳೆ ಪಟಾಕಿ ಸದ್ದಿಗೆ ಆನೆ ಬೆಚ್ಚಿಬಿದ್ದ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದ ಆನೆ ಬೆಚ್ಚಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪರಿಣಾಮವಾಗಿ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಯಿತು. ಜಂಬೂಸವಾರಿ ವೇಳೆ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಗಿದೆ. ಇದರಿಂದ ಮೆರವಣಿಗೆಯಲ್ಲಿದ್ದ ಗೋಪಾಲಸ್ವಾಮಿ ಎಂಬ ಆನೆ ಬೆಚ್ಚಿ ಹಿಂದಕ್ಕೆ ತಿರುಗಿದೆ. … Continued