ಕರ್ನಾಟಕದಾದ್ಯಂತ ಕೊರೊನಾ ಮಾರ್ಗಸೂಚಿ ವಿಸ್ತರಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಹುತೇಕ ನಿರ್ಬಂಧಗಳನ್ನು ಸಡಿಲಗೊಳಿಸಿರುವ ರಾಜ್ಯ ಸರ್ಕಾರ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಹೊಟೇಲ್‌, ರೆಸ್ಟೋರೆಂಟ್, ಚಿತ್ರಮಂದಿರ, ರಂಗಮಂದಿರ, ಪಬ್ ಸೇರಿ ಎಲ್ಲೆಡೆ ಶೇ.100ರಷ್ಟು ಅವಕಾಶ ಸೇರಿ ಎಲ್ಲವೂ ವಿಸ್ತರಣೆಯಾಗಲಿದೆ. ರಾಜ್ಯಾದ್ಯಂತ ಅ.25ರ ಬೆಳಗ್ಗೆ 6 ಗಂಟೆ ವರೆಗೆ ಹಾಲಿ ಮಾರ್ಗಸೂಚಿಗಳೇ ಅನ್ವಯವಾಗಲಿವೆ. ಇದರ ಪ್ರಕಾರ 5ನೇ ತರಗತಿ ಒಳಗಿನ ವಿದ್ಯಾರ್ಥಿಗಳಿಗೆ ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಮುಂದುವರೆಯಲಿವೆ. ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಜಾತ್ರೆ, ಧಾರ್ಮಿಕ ಉತ್ಸವ, ಮೆರವಣಿಗೆಗಳಿಗೆ ನಿಷೇಧ ಹೇರಲಾಗಿದೆ. ಈ ಹಿನ್ನೆಲೆ ಈದ್ ಮಿಲಾದ್ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ವೇಳೆಯೂ ಸಾರ್ವಜನಿಕ ಮೆರವಣಿಗೆಗೆ ಅವಕಾಶವಿಲ್ಲ. ನಿರ್ದಿಷ್ಟ ಸಂಖ್ಯೆಯಲ್ಲಿ ಮಾತ್ರ ಜನರು ಭಾಗವಹಿಸಿ ಪ್ರಾರ್ಥನೆ ಅಥವಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
ಜಲಕ್ರೀಡೆಗಳಿಗೆ ನೀಡಿರುವ ಅನುಮತಿ ಹಾಗೂ ವಸ್ತು ಪ್ರದರ್ಶನ, ಸಿನಿಮಾ ಮಂದಿರ, ಪಬ್‍ಗಳಿಗೆ ನೀಡಿರುವ ಅವಕಾಶ ಸೇರಿದಂತೆ ಎಲ್ಲಾ ಆದೇಶಗಳೂ ಅ.25ರ ವರೆಗೂ ವಿಸ್ತರಿಸಲಾಗಿದೆ ಎಂದು ಕಂದಾಯ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಶಾಲಾ-ಕಾಲೇಜು, ವೈದ್ಯಕೀಯ ಕಾಲೇಜು ಮತ್ತು ಸಂಬಂಧಿತ ಸಂಸ್ಥೆಗಳ ಪುನರಾರಂಭ, ಅಗತ್ಯವಿದ್ದರೆ ಹೆಚ್ಚುವರಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಕಾರಿಗಳಿಗೆ ಅಧೀಕಾರ ನೀಡಲಾಗಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement