1 ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಕ್ಕೆ ಸಿದ್ಧತೆ, ಅಕ್ಟೋಬರ್ 21ರಿಂದ ಬಿಸಿಯೂಟ

ಬೆಂಗಳೂರು: 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವುದು ಹಾಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಪೂರ್ಣವಾಗಿ ಸಿದ್ದತೆ ಮಾಡಿಕೊಳ್ಳಲಾಗಿದೆ. ಅಕ್ಟೋಬರ್ 20ರವರೆಗೆ ಶಾಲೆಗಳಿಗೆ ದಸರಾ ರಜೆಯಿದೆ. ಅಕ್ಟೋಬರ್ 21ರಿಂದ ಬಿಸಿಯೂಟ ( Mid Day Meals ) ಪುನರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯಲಿದ್ದು, ಆ ಸಮಿತಿ ಒಪ್ಪಿಗೆ ಪಡೆದು ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು. ಶಾಲೆ ಆರಂಭಕ್ಕೆ ಶೌಚಾಲಯದ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ 6ರಿಂದ 12ನೇ ತರಗತಿ ವರೆಗೆ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಪ್ರಮಾಣ ಶೇ.90ರಷ್ಟಿದೆ. ಅ.20ರ ವರೆಗೆ ರಜೆಯಿದ್ದು, ಅ.21ರಿಂದ ಅನುಮತಿ ದೊರೆತರೆ ಶಾಲೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ತೆಲಂಗಾಣ ಸೇರಿದಂತೆ ಬೇರೆ ರಾಜ್ಯಗಳ ಮಾದರಿಯನ್ನು ಪರಿಶೀಲಿಸಿ ಶುಲ್ಕ ನಿಯಂತ್ರಣ ಸಮಿತಿ ರಚನೆಯ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಅಲ್ಲಿ ಯಾವ ಯಾವ ರೀತಿ ಅನುಷ್ಠಾನವಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು. ಈಗಾಗಲೇ ಶಾಲಾ ಶುಲ್ಕದ ಬಗ್ಗೆ ಪೋಷಕರು ಮತ್ತು ಅಧಿಕಾರಿಗಳೊಂದಿಗೂ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಪಿಯುಸಿ ಪೂರಕ ಪರೀಕ್ಷೆ ಕುರಿತು ನಿರ್ಧರಿಸಲಾಗುವುದು. 12 ಸಾವಿರ ವಿದ್ಯಾರ್ಥಿಗಳಿದ್ದು, ಪೂರಕ ಪರೀಕ್ಷೆ ನಡೆಸಿದರೂ ಕೂಡ ವಿದ್ಯಾರ್ಥಿಗಳು ಕಾಲೇಜಿಗೆ ಸೇರುವ ಅವಕಾಶವಿಲ್ಲ. ಹಾಗಾಗಿ ಪೂರಕ ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಪಠ್ಯಪುಸ್ತಕದಲ್ಲಿನ ದೋಷಗಳ ಬಗ್ಗೆ ದೂರುಗಳು ಬಂದಿರುವುದರಿಂದ ಸಮಿತಿ ರಚಿಸಲಾಗಿದೆ. ದೋಷಗಳನ್ನು ಸರಿಪಡಿಸುವ ಬಗ್ಗೆ ಆ ಸಮಿತಿ ಪರಾಮರ್ಶೆ ಮಾಡಲಿದೆ. ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾಯ್ದೆ ಪ್ರಕಾರ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ನಾಗೇಶ್ ತಿಳಿಸಿದರು

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement