ಗಡಿಕೇಶ್ವಾರ: ಸಿದ್ದರಾಮಯ್ಯ ಮಾತನಾಡುತ್ತಿರುವಾಗಲೇ ಕಂಪಿಸಿದ ಭೂಮಿ

ಕಲಬುರಗಿ: ಭೂಕಂಪನದ ಆತಂಕದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಧೈರ್ಯ ತುಂಗಿಹಾಗೂ ಆಹವಾಲು ಆಲಿಸಿ ಜರನ್ನುದ್ದೇಶಿಸಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿದ ಅನುಭವವಾಗಿದೆ. ಕೆಲವು ದಿನಗಳಿಂದ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಹಾಗೂ ಸುತ್ತ ಮುತ್ತ ಗ್ರಾಮ ಭೂಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಗಡಿಕೇಶ್ವಾರ ಗ್ರಾಮಕ್ಕೆ … Continued

ತೆಂಕುತಿಟ್ಟು ಯಕ್ಷಗಾನದ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ನಿಧನ

ಮಂಗಳೂರು: ಗಾನಗಂಧರ್ವ ಎಂದೇ ಖ್ಯಾತರಾಗಿದ್ದ ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. 66 ವರ್ಷದ ಅವರಿಗೆ ಕೆಲವು ತಿಂಗಳ ಹಿಂದೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ನ್ಯುಮೋನಿಯಾದಿಂದ ಬಳಲಿದ್ದ ಅವರು ಹೃದಯ ಸಂಬಂಧಿ ಕಾಯಿಲೆಗೂ ತುತ್ತಾಗಿದ್ದರು. ಮಂಗಳವಾರ ಬೆಳಗ್ಗೆ 7.30ರ ಸುಮಾರಿಗೆ ಹೃದಯಾಘಾತದಿಂದ ಪದ್ಯಾಣ ಗಣಪತಿ ಭಟ್ ಕೊನೆಯುಸಿರೆಳೆದಿದ್ದಾರೆ. … Continued

ಪಿಆರ್ ಕಂಪನಿ ಮೇಲೆ ಆದಾಯ ತೆರಿಗೆ ದಾಳಿ

ಬೆಂಗಳೂರು: ಪ್ರಮುಖ ರಾಜಕಾರಣಿಗಳ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದ ಕಂಪೆನಿಯೊಂದರ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ಯಾಲೇಸ್ ಗುಟ್ಟಳ್ಳಿಯಲ್ಲಿರುವ ಡಿಸೈನ್ ಬಾಕ್ಸ್ ಎಂಬ ಪಿಆರ್ ಕಂಪೆನಿಯ ಮೇಲೆ ಎಂಟು ಮಂದಿ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇದೇ ವೇಳೆ ಐವರು ಅಧಿಕಾರಿಗಳ … Continued

ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ ಪತ್ತೆ: ಅಧಿಕೃತ ಮಾಹಿತಿ ನೀಡಿದ ಐಟಿ ಇಲಾಖೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮನೆಗಳ ಮೇಲೆ ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿದೆ ಎಂದು ಐಟಿ ಇಲಾಖೆ ಅಧಿಕಾರಿಗಳು ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಅಕ್ಟೋಬರ್ 7ರಂದು ನಾಲ್ಕು ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆದಿತ್ತು. ಐಟಿ ದಾಳಿ ವೇಳೆ 4.69 ಕೋಟಿ ರೂ.ಗಳ ನಗದು ಜಪ್ತಿ ಮಾಡಲಾಗಿದೆ. 8.67 … Continued

2-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್’ ತುರ್ತು ಬಳಕೆಗೆ ಡಿಜಿಸಿಐ ಇನ್ನೂ ಅನುಮೋದಿಸಿಲ್ಲ ಸಚಿವೆ ಡಾ. ಭಾರತಿ ಪವಾರ್

ನವದೆಹಲಿ: ಕೋವಾಕ್ಸಿನ್ ಕೋವಿಡ್-19 ಲಸಿಕೆ 2-18 ವರ್ಷ ವಯಸ್ಸಿನವರಿಗೆ ತುರ್ತು ಬಳಕೆಗಾಗಿ ಡಿಜಿಸಿಐ ಇನ್ನೂ ಅನುಮೋದನೆ ನೀಡಿಲ್ಲ. ಇನ್ನೂ ಅದರ ಮೌಲ್ಯಮಾಪನ ನಡೆಯುತ್ತಿದೆ ಎಂದು ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವೆ ಡಾ. ಭಾರತಿ ಪ್ರವೀಣ ಪವಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಪ್ರತಿಕ್ರಿಯಿಸಿ ಮಾಹಿತಿ ನೀಡಿರುವ ಅವರು, ಭಾರತ್ ಬಯೋಟೆಕ್ ನ … Continued

ತತ್ಕಾಲ್ ಟ್ರಾಕ್ಟರ್ ಸಾಲ: ರೈತರಿಗೆ ಒಳ್ಳೆಯ ಸುದ್ದಿ ನೀಡಿದ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ

ನವದೆಹಲಿ : ರೈತರ ಸಂಕಷ್ಟ ಬಗೆಹರಿಹಾರಕ್ಕೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI) ಮುಂದಾಗಿದೆ.‌ ಕೃಷಿ ಕಾರ್ಯಕ್ಕಾಗಿ ಬಾಡಿಗೆ ಟ್ರ್ಯಾಕ್ಟರ್ ಪಡೆದು ಬೇಸತ್ತು ಹೊಸ ಟ್ರ್ಯಾಕ್ಟರ್ ಖರೀದಿಗೆ ಯೋಜಿಸುತ್ತಿರುವ ರೈತರಿಗೆ ಬ್ಯಾಂಕ್‌ ಸಿಹಿ ಸುದ್ದಿ ನೀಡಿದೆ. ಟ್ರ್ಯಾಕ್ಟರ್‌ ಖರೀದಿ ಆಸೆಯಿದ್ದು, ಹಣದ ಕೊರತೆಯಾದರೆ ದೇಶದ ಅತಿದೊಡ್ಡ ಬ್ಯಾಂಕ್‌ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ರೈತರಿಗಾಗಿ … Continued

ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ Gmail ಸೇವೆಗಳಲ್ಲಿ ವ್ಯತ್ಯಯ..! ಇಮೇಲ್‌ ಕಳುಹಿಸಲು ಪರದಾಟ

ನವದೆಹಲಿ : ಸಾಮಾಜಿಕ ಜಾಲತಾಣಗಳ ಸರ್ವರ್‌ ಡೌನ್‌ ಆಗಿರುವ ಬೆನ್ನಲ್ಲೇ ಈಗ ಭಾರತದ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಜಿಮೇಲ್‌ ಡೌನ್‌ ಾದ ವರದಿಗಳು ಬಂದಿವೆ. ಮಧ್ಯಾಹ್ನ 3 ಗಂಟೆಯಿಂದ ಈ ಸಮಸ್ಯೆ ಎದುರಾಗಿದ್ದು, ಲಕ್ಷಾಂತರ ಗ್ರಾಹಕರು ಜಿಮೇಲ್‌ ಮೂಲಕ ಇಮೇಲ್‌ ಕಳುಹಿಸಲಾಗದೆ ಪರದಾಡುತ್ತಿದ್ದಾರೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿನ ಜನರು ಹೆಚ್ಚಾಗಿ ಗೂಗಲ್ಲಿನ … Continued

ಮನೆಯಲ್ಲಿ ಆರು ಜನ ಇದ್ದರೂ ಈ ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಒಂದು ಮತ..!

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ತನ್ನ ಬಲ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ತಮಿಳುನಾಡಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಚುನಾವಣೆಯಲ್ಲಿ ಕೇವಲ ಒಂದೇ ಒಂದಉ ಮತ ಪಡೆದಿರುವುದೇ ಸಾಕ್ಷಿಯಾಗಿದೆ. ಕುಟುಂಬದಲ್ಲಿ ಆರು ಸದಸ್ಯರಿದ್ದರೂ ತನ್ನದೇ ಒಂದು ಮತ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ನಡೆದ ಕೊಯಮತ್ತೂರು ಜಿಲ್ಲಾ ಸ್ಥಳೀಯ … Continued

ಅಹಂಕಾರ ತೊಡೆಯಲು ಭಿಕ್ಷಾಟನೆ, ಹಿಂದಿನ ಜೀವನದ ಬಗ್ಗೆ ತಿಳಿದುಕೊಳ್ಳಲು ಭಗವದ್ಗೀತೆ ಅಧ್ಯಯನಕ್ಕಾಗಿ ಪ್ರತಿ ಭಾನುವಾರ ರಜೆ ಕೇಳಿ ಅರ್ಜಿ ಬರೆದ ಇಂಜಿನಿಯರ್‌..!

ಭೋಪಾಲ್: ಮಧ್ಯಪ್ರದೇಶ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಇಂಜಿನಿಯರ್ ಒಬ್ಬರ ರಜೆ ಅರ್ಜಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ವಿಲಕ್ಷಣ ಪತ್ರದಲ್ಲಿ, ಅಗರ್ ಮಾಲ್ವಾ ಜಿಲ್ಲೆಯ ಸುಸ್ನರ್‌ನಲ್ಲಿನ ಎಂಜಿಎನ್‌ಆರ್‌ಇಜಿಎ ಯೋಜನೆಗಳ ಉಪಇಂಜಿನಿಯರ್ ರಾಜಕುಮಾರ ಯಾದವ್, ತನ್ನ ಹಿಂದಿನ ಜೀವನದ ಬಗ್ಗೆ ಹೆಚ್ಚಿನದನ್ನು ತಿಳಿದುಕೊಳ್ಳಲು ತಾನು ಭಿಕ್ಷೆ ಬೇಡಬೇಕು ಮತ್ತು ಭಗವದ್ಗೀತೆ ಅಧ್ಯಯನ ಮಾಡಬೇಕು ಎಂದು … Continued

ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್​ ಖರೆ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನಿವೃತ್ತ ಐಎಎಸ್​ ಅಧಿಕಾರಿ ಅಮಿತ್​ ಖರೆ ಇಂದು (ಮಂಗಳವಾರ) ನೇಮಕವಾಗಿದ್ದಾರೆ. ಅಮಿತ್​ ಖರೆ ಅವರು 1985ನೇ ಬ್ಯಾಚ್​​ನ ಐಎಎಸ್​ ಅಧಿಕಾರಿಯಾಗಿದ್ದು, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿದ್ದಾರೆ. ಉನ್ನತ ಶಿಕ್ಷಣ ಕಾರ್ಯದರ್ಶಿಯೂ ಆಗಿದ್ದ ಅವರು ಸೆಪ್ಟೆಂಬರ್​ 30ರಂದು ನಿವೃತ್ತರಾಗಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನೇಮಕವಾಗಿದ್ದಾರೆ. … Continued