ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ಮಂಗಳೂರಿನಲ್ಲಿ ಬೆಂಗಳೂರಿನ ನಾಲ್ವರು ಮಕ್ಕಳು ಪತ್ತೆ

ಮಂಗಳೂರು: ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಕೊನೆಗೂ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಂಗಳೂರಲ್ಲಿ ಪತ್ತೆಯಾಗಿದ್ದಾರೆ. ಈಗ ಪಾಂಡೇಶ್ವರ ಪೊಲೀಸರು ಮಕ್ಕಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಸೋಲದೇವನಹಳ್ಳಿ ಕ್ರಿಟನ್ ಕುಶಾಲ್ ಅಪಾರ್ಟ್‌ಮೆಂಟಿನಿಂದ ನಾಪತ್ತೆಯಾಗಿದ್ದ ಮಕ್ಕಳು ಮನೆಯಿಂದ ಹೋಗುವಾಗ ಚಿನ್ನದ ನೆಕ್ಲೆಸ್, ಹಣ ತೆಗೆದುಕೊಂಡು ಹೋಗಿದ್ದರು. ಹೀಗಾಗಿ ಮಕ್ಕಳ ದಾಖಲೆಯನ್ನ ಎಲ್ಲಾ ಠಾಣೆಗಳಿಗೆ ರವಾನಿಸಿ ಮಕ್ಕಳನ್ನು ಹುಡುಕಲಾಗುತ್ತಿತ್ತು. ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ನಗರದಲ್ಲಿದ್ದ ಮಕ್ಕಳನ್ನು ರಿಕ್ಷಾ ಚಾಲಕರು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಈಗ ಮಕ್ಕಳು ಸುರಕ್ಷಿತವಾಗಿದ್ದಾರೆ.
ಬೆಂಗಳೂರು ಉತ್ತರ ವಲಯದಿಂದ 4 ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಲಾಗಿದ್ದು ಸೋಲದೇವನಹಳ್ಳಿ ಠಾಣೆ ಪೊಲೀಸರ ಮೇಲೆ ಒತ್ತಡ ಹೆಚ್ಚಾಗಿತ್ತು. ಈಗ ಈ ಪ್ರಕರಣ ಸುಖಾಂತ್ಯ ಕಂಡಿದೆ.

0 / 5. 0

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement