ಧಾರವಾಡ: ಜೆ.ಎಸ್.ಎಸ್ ಶಿಕ್ಷಕಿಯರಿಗೆ ಸುವರ್ಣ ಪದಕ

ಧಾರವಾಡ: ಧಾರವಾಡದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಗಳ ಶಿಕ್ಷಕಿಯರು ಕರ್ನಾಟಕ ವಿಶ್ವವಿದ್ಯಾಲಯದಿಂದ ಸುವರ್ಣ ಪದಕ ಪಡೆದಿದ್ದಾರೆ.
ಹುಬ್ಬಳ್ಳಿಯ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿ ಸುನಂದಾ ಸಪೂರಿ ಅವರಿಗೆ ಎಂ.ಎಸ್ ಸ್ನಾತಕೋತ್ತರ ಪದವಿಯಲ್ಲಿ ಸುವರ್ಣ ಪದಕ ದೊರೆತಿದೆ.
ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಗ್ರಂಥಪಾಲಕಿಯಾಗಿ ಸೇವೆ ಸಲ್ಲಿಸುತ್ತಿರುವ ರೇಣುಕಾ ಯಳಮಲಿ ಅವರಿಗೆ ಲೈಬ್ರರಿ ಸೈನ್ಸ್‌ ಸ್ನಾತಕೋತ್ತರ ಪದವಿಯಲ್ಲಿ ಎರಡು ಬಂಗಾರದ ಪದಕ ದೊರೆತಿದೆ. ಈ ಸಾಧನೆಗಾಗಿ ಇವರನ್ನು ಜನತಾ ಶಿಕ್ಷಣ ಸಮಿತಿಯ ಪರವಾಗಿ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರರವರು ಹಾಗೂ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದರವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement