ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧೀಜಿ: ರಾಜನಾಥ್‌ ಸಿಂಗ್‌

ನವದೆಹಲಿ: ವೀರ ಸಾರ್ವಕರ್‌ ಅಂಡಮಾನ್‌ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್‌ ಅವರಿಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರತಿಪಾದಿಸಿದ್ದಾರೆ.
ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಸಾರ್ವಕರ್‌ ಕುರಿತ ವೀರ ಸಾವರ್ಕರ್: ವಿಭಜನೆಯನ್ನು ತಡೆಯಬಹುದಾದ ವ್ಯಕ್ತಿ ಎಂಬ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಾವರು, “ಸಾವರ್ಕರ್‌ಗೆ ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಹೇಳಿದ್ದು ಗಾಂಧೀಜಿ. ಆದರೆ ಸ್ವಾತಂತ್ರ್ಯ ಹೋರಾಟಕ್ಕೆ ಸಾವರ್ಕರ್‌ ನೀಡಿದ ಕೊಡುಗೆಯನ್ನು ಕೆಲವು ಸಿದ್ಧಾಂತ ಅನುಸರಿಸುವವರು ನಿಂದಿಸಿದ್ದಾರೆ ಹಾಗೂ ವಿರೋಧಿಸಿದ್ದಾರೆ. ಇದನ್ನು ಸಹಿಸಲಾಗದು ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ.
ಸಾರ್ವಕರ್‌ ವಿರು‌ದ್ಧವಾಗಿ ಹಲವಾರು ಸುಳ್ಳು ಸುದ್ದಿಗಳನ್ನು ಹರಡಲಾಗಿದೆ. ಬ್ರಿಟಿಷ್‌ ಸರ್ಕಾರದ ಮುಂದೆ ಸಾರ್ವಕರ್‌ ಎರಡು ಬಾರಿ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದರು ಎಂದು ಪದೇ ಪದೇ ಹೇಳಲಾಗುತ್ತದೆ. ಆದರೆ ನಿಜವಾಗಿ ಸಾರ್ವಕರ್‌ ತನ್ನ ಬಿಡುಗಡೆಗಾಗಿ ಈ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಜೈಲಿನಲ್ಲಿರುವ ಕೈದಿಗಳು ಕ್ಷಮಾದಾನ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂದು ರಕ್ಷಣಾ ಸಚಿವರು ಹೇಳಿದರು.
ಮಹಾತ್ಮ ಗಾಂಧೀಜಿ ಅವರು ಸಾರ್ವಕರ್‌ ಅವರ ಬಳಿ ಕ್ಷಮಾದಾನ ಅರ್ಜಿ ಸಲ್ಲಿಸಲು ಹೇಳಿದರು. ಸಾರ್ವಕರ್‌ ಬಂಧನದಿಂದ ಮುಕ್ತಗೊಳಿಸಬೇಕು ಎಂದು ಮಹಾತ್ಮ ಗಾಂಧೀಜಿ ಈ ಮನವಿ ಮಾಡಿದ್ದರು ಎಂದು ಅವರು ವ್ಯಾಖ್ಯಾನಿಸದರು.
ಸಾರ್ವಕರ್‌ ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳ ನಡುವೆ ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು. ಆದರೆ ಸಾರ್ವಕರ್‌ ಅವರು ದೇಶದ ಸಾಂಸ್ಕೃತಿಕ ಏಕತೆಗಾಗಿ ನೀಡಿದ ಕೊಡುಗೆಯನ್ನು ಕಡೆಗಣಿಸಲಾಗುತ್ತಿದೆ ಎಂದು ರಕ್ಷಣಾ ಸಚಿವರು ಹೇಳಿದರು.. 2003 ರಲ್ಲಿ ಸಾವರ್ಕರ್ ಅವರ ಚಿತ್ರವನ್ನು ಸಂಸತ್ತಿನಲ್ಲಿ ಇರಿಸಲಾಗಿತ್ತು. ಈ ಸಂದರ್ಭದಲ್ಲಿ ಹೆಚ್ಚಿನ ರಾಜಕೀಯ ಪಕ್ಷಗಳು ಇದನ್ನು ವಿರೋಧ ಮಾಡಿದ್ದವು ಎಂದು ಅವರು ಹೇಳಿದರು.
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮಾತನಾಡಿ, “ಸಾವರ್ಕರ್‌ ನೇರವಾಗಿ ಮಾತನಾಡುತ್ತಿದ್ದ ಕಾರಣದಿಂದಾಗಿ ಅವರನ್ನು ತಪ್ಪಾಗಿ ತಿಳಿಯಲಾಗಿದೆ. ಆದರೆ ಎಲ್ಲಾ ಭಾರತೀಯರು ಆ ಸಂದರ್ಭದಲ್ಲಿ ಸಾವರ್ಕರ್‌ ಅವರಂತೆ ನೇರವಾಗಿ ಮಾತನಾಡಿದ್ದರೆ ದೇಶವು ವಿಭಜನೆ ಆಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.
ವೀರ ಸಾವರ್ಕರ್: ವಿಭಜನೆಯನ್ನು ತಡೆಯಬಹುದಾದ ವ್ಯಕ್ತಿ ಎಂಬ ಪುಸ್ತಕವನ್ನು ಉದಯ್ ಮಹೂರ್ಕರ್ ಮತ್ತು ಚಿರಾಯು ಪಂಡಿತ್ ಬರೆದಿದ್ದಾರೆ ಮತ್ತು ರೂಪಾ ಪ್ರಕಟಣೆಯು ಪುಸ್ತಕವನ್ನು ಪ್ರಕಟಿಸಿದೆ.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement