ಕರ್ನಾಟಕದಲ್ಲಿ ಬುಧವಾರ 332 ಮಂದಿಗೆ ಹೊಸ ಕೋವಿಡ್‌ ಸೋಂಕು, ಹತ್ತು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 332 ಮಂದಿಗೆ ಹೊಸದಾಗಿ ಕೋವಿಡ್‌ ಸೋಂಕು ಕಾಣಿಸಿಕೊಂಡಿದ್ದು 11 ಮದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 515 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,81,732 ಕ್ಕೆ ಏರಿಕೆಯಾಗಿದೆ ಹಾಗೂ ಚೇತರಿಸಿಕೊಂಡವರ ಸಂಖ್ಯೆ 29,34,085 ಕ್ಕೆ ಹೆಚ್ಚಳವಾಗಿದೆ.ಸೋಂಕಿನಿಂದ ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 37,906 ಕ್ಕೆ ಹೆಚ್ಚಳವಾಗಿದೆ. ಎಂದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,712 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ‌ಇಂದು ಹತ್ತು ಜಿಲ್ಲೆಗಳಲ್ಲಿ ಯಾವುದೇ ಸೋಂಕು ಪ್ರಕರಣ ದೃಢಪಟ್ಟಿಲ್ಲ. ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ,, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ,ರಾಯಚೂರು, ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಸೋಂಕು ದೃಢಪಟ್ಟಿಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.41 ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 145 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಇಂದು 5 ಮಂದಿ ಮೃತಪಟ್ಡಿದ್ದಾರೆ. ಜೊತೆಗೆ 125 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾವಾರು ಸೋಂಕಿನ ಮಾಹಿತಿ…

ಬಾಗಲಕೋಟೆ – 0, ಬಳ್ಳಾರಿ – 1, ಬೆಳಗಾವಿ -10, ಬೆಂಗಳೂರು ಗ್ರಾಮಾಂತರ- 6, ಬೆಂಗಳೂರು ನಗರ– 145. ಬೀದರ್ -0, ಚಾಮರಾಜನಗರ – 0,ಚಿಕ್ಕಬಳ್ಳಾಪುರ – 0.
ಚಿಕ್ಕಮಗಳೂರು- 0, ಚಿತ್ರದುರ್ಗ – 1. ದಕ್ಷಿಣ ಕನ್ನಡ -27. ದಾವಣಗೆರೆ -2. ಧಾರವಾಡ -4. ಗದಗ – 0. ಹಾಸನ – 21, ಹಾವೇರಿ – 0, ಕಲಬುರಗಿ- 0. ಕೊಡಗು – 5,
ಕೋಲಾರ -1, ಕೊಪ್ಪಳ -0, ಮಂಡ್ಯ – 8, ಮೈಸೂರು -39, ರಾಯಚೂರು- 0, ರಾಮನಗರ -3, ಶಿವಮೊಗ್ಗ – 6, ತುಮಕೂರು -12, ಉಡುಪಿ – 17, ಉತ್ತರ ಕನ್ನಡ – 12, ವಿಜಯಪುರ – 5, ಯಾದಗಿರಿ- 0

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement