ಚರ್ಚ್‌ನಲ್ಲಿ ಚಾಕುವಿನಿಂದ ಇರಿದು ಬ್ರಿಟಿಷ್ ಸಂಸದ ಡೇವಿಡ್ ಅಮೆಸ್ ಕೊಲೆ

ಲಂಡನ್‌: ಡೇವಿಡ್ ಅಮೆಸ್, 69, ಪೂರ್ವ ಇಂಗ್ಲೆಂಡ್‌ನ ಎಸ್ಸೆಕ್ಸ್‌ನಲ್ಲಿರುವ ಸೌಥೆಂಡ್ ವೆಸ್ಟ್‌ ಸಂಸತ್ ಸದಸ್ಯ, ಬೆಲ್ಫೇರ್ಸ್ ಮೆಥೋಡಿಸ್ಟ್ ಚರ್ಚ್‌ನಲ್ಲಿ ನಡೆದ ಸಭೆಯಲ್ಲಿ ಮಧ್ಯರಾತ್ರಿಯ ವೇಳೆಗೆ ನಡೆದ ಚಾಕು ಇರಿತದಿಂದ ಕೊಲೆಯಾಗಿದ್ದಾರೆ. ಪೊಲೀಸರು ಈ ಸಂಬಂಧ ಓರ್ವನನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೇರೆಯವರನ್ನು ಹುಡುಕುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಚರ್ಚ್ ಒಳಗೆ ಸಂಸದರ ಜೀವ ಉಳಿಸಲು ತುರ್ತು … Continued

ಬಾಂಗ್ಲಾದೇಶದ ನೊಖಾಲಿಯಲ್ಲಿ ಇಸ್ಕಾನ್ ದೇವಸ್ಥಾನ ಧ್ವಂಸ, ಗುಂಪಿನಿಂದ ಭಕ್ತರ ಮೇಲೆ ದಾಳಿ

ನವದೆಹಲಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಇನ್ನೊಂದು ದಾಳಿಯಲ್ಲಿ, ಗುಂಪೊಂದು ಶುಕ್ರವಾರ ನೋಖಾಲಿ ಪ್ರದೇಶದ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರ ಮೇಲೆ ದಾಳಿ ಮಾಡಿತು. ದೇವಸ್ಥಾನವು ಗಮನಾರ್ಹ ಹಾನಿಯನ್ನು ಅನುಭವಿಸಿದೆ ಮತ್ತು ಭಕ್ತರ ಸ್ಥಿತಿ ಗಂಭೀರವಾಗಿದೆ ಎಂದು ಇಸ್ಕಾನ್ ಟ್ವೀಟ್ ನಲ್ಲಿ ಹೇಳಿದೆ. ಇಸ್ಕಾನ್ ದೇವಸ್ಥಾನ ಮತ್ತು ಭಕ್ತರು ಇಂದು ಬಾಂಗ್ಲಾದೇಶದ ನೋಖಾಲಿಯಲ್ಲಿ ಒಂದು … Continued

ರಾಜೀನಾಮೆ ಹಿಂಪಡೆದ ನವಜೋತ್ ಸಿಂಗ್ ಸಿಧು : ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಮುಂದುವರಿಕೆ

ನವದೆಹಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ನವಜೋತ್ ಸಿಂಗ್ ಸಿಧು ಹಿಂಪಡೆದಿದ್ದಾರೆ. ಮತ್ತು ಅದೇ ಹುದ್ದೆಯಲ್ಲಿ ತಮ್ಮ ಕರ್ತವ್ಯವನ್ನು ಮುಂದುವರಿಸಲಿದ್ದಾರೆ. ಶುಕ್ರವಾರ, ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದ ನಂತರ, ನವಜೋತ್ ಸಿಂಗ್ ಸಿಧು “ನಾನು ನನ್ನ ಎಲ್ಲಾ ಕಳವಳಗಳನ್ನು ರಾಹುಲ್ ಗಾಂಧಿಯೊಂದಿಗೆ ಹಂಚಿಕೊಂಡಿದ್ದೇನೆ. ಎಲ್ಲವನ್ನೂ ಬಗೆಹರಿಸಲಾಗಿದೆ” ಎಂದು ಹೇಳಿದ್ದಾರೆ. ಅಖಿಲ … Continued

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್‌ ಗಾರ್ಡ್‌ ಹಾಗೂ ಟೂರಿಸ್ಟ್‌ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಕಡಲತೀರದಲ್ಲಿ ಶುಕ್ರವಾರ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನಿವಾಸಿಗಳಾಗಿರುವ ಅರ್ಜುನ್‌, ಉಮೇಶ್‌, ಸೂರ್ಯ ಎಂಬ ಮೂವರನ್ನು ರಕ್ಷಣೆ ಮಾಡಲಾಗಿದೆ. ಶಿಕಾರಿಪುರದಿಂದ ಪ್ರವಾಸಕ್ಕಾಗಿ ಮೂವರು ಕೂಡ ಮುರ್ಡೇಶ್ವರಕ್ಕೆ ಬಂದಿದ್ದಾರೆ. ಈ ವೇಳೆಯಲ್ಲಿ … Continued

ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಶಾಸಕರ ವಿರುದ್ಧ ಪ್ರಕರಣ ದಾಖಲು

ಕೋಲಾರ: ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ್ದಲ್ಲದೆ ಬೇರೆಯವರ ಹೆಸರಿನಲ್ಲಿದ್ದ ಬಂದೂಕು ಬಳಕೆ ಮಾಡಿದ ಹಿನ್ನೆಲೆ ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಆಯುಧ ಪೂಜೆ ಮುಗಿದ ಬಳಿಕ ಶಾಸಕ … Continued

ಕರ್ನಾಟಕದಲ್ಲಿ ಸೋಂಕು ಏರಿಕೆ, ಸಾವಿನ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕು ಸಂಖ್ಯೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಶುಕ್ರವಾರ ಹೊಸದಾಗಿ 470 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 368 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.50 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ. 1.91 … Continued

ಸಿಂಘು ಗಡಿ ಹತ್ಯೆ ಪ್ರಕರಣ: ಪೊಲೀಸರಿಗೆ ಶರಣಾದ ಸರಬ್ಜಿತ್ ಸಿಂಗ್

ನವದೆಹಲಿ:ನಿಹಾಂಗ್ ಸಮುದಾಯಕ್ಕೆ ಸೇರಿದ ಸರಬ್ಜಿತ್ ಸಿಂಗ್ ಎಂಬ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದು, ದೆಹಲಿ-ಹರಿಯಾಣ ಗಡಿ ಸಮೀಪದ ಕುಂಡ್ಲಿಯಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಒಬ್ಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಜವಾಬ್ದಾರಿಯನ್ನು ಈತ ಹೊತ್ತುಕೊಂಡಿದ್ದಾನೆ. ಸರಬ್ಜಿತ್ ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ವಿವರಗಳ ಪ್ರಕಾರ, ಅವರನ್ನು ಶನಿವಾರ (ನಾಳೆ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. .35 ವರ್ಷದ ವ್ಯಕ್ತಿಯನ್ನು … Continued

ಬಾಡ :ಶ್ರೀ ಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವ ಸಂಪನ್ನ

ಕುಮಟಾ : ತಾಲೂಕಿನ ಪ್ರಸಿದ್ಧ ಶಕ್ತಿ ಸ್ಥಳ ಬಾಡದ ಶ್ರೀ ಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವ ಸಂಪನ್ನವಾಯಿತು. ವಿಜಯ ದಶಮಿ ದಿನವಾದ ಶುಕ್ರವಾರ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳ ಮೂಲಕ ನವರಾತ್ರಿ ಉತ್ಸವ ವೈಭವಯುತವಾಗಿ ನಡೆಯಿತು. ಮುಂಜಾನೆ ಪಲ್ಲಕಿ ಉತ್ಸವ ನಡೆಯಿತು. ಶ್ರೀ ಕಾಂಚಿಕಾ ಪರಮೇಶ್ವರಿ ಪಲ್ಲಕಿ ಮೂಲಕ ಭತ್ತದ ಗದ್ದೆಗೆ ಸಾಗಿ … Continued

ದುರ್ಗಾ ದೇವಿ ಮೆರವಣಿಗೆ ನಡುವೆ ನುಗ್ಗಿದ ಕಾರು; ಒಂದು ಸಾವು, 20 ಮಂದಿಗೆ ಗಾಯ, ದೃಶ್ಯ ವಿಡಿಯೊದಲ್ಲಿ ಸೆರೆ

ನವದೆಹಲಿ: ದುರ್ಗಾ ದೇವಿ ಮೂರ್ತಿಯ ಮೆರವಣಿಗೆಯ ನಡುವೆ ಕಾರು ನುಗ್ಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಡದ ಜಶ್‌ಪುರದಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಆದರೆ ಘಟನೆಯಲ್ಲಿ, ಕನಿಷ್ಠ ನಾಲ್ಕು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ. 20 ಮಂದಿ ಇತರರು ಗಾಯಗೊಂಡಿದ್ದು ಇದರಲ್ಲಿ ನಾಲ್ವರ ಸ್ಥಿತಿ ಚಗಂಭೀರವಾಗಿದೆ … Continued

ಕೋವಿಡ್ ಲಸಿಕೆ ಹಾಕಲು ಕಾಲು ಸಂಕದ ಮೇಲೆ ಉಕ್ಕಿದ ನದಿ ದಾಟಿದ ಆರೋಗ್ಯ ಕಾರ್ಯಕರ್ತರ ವಿಡಿಯೋ ವೈರಲ್

ಇಟಾನಗರ: ಕೊರೊನಾ ವೈರಸ್ ವಿರುದ್ಧ ಜನರಿಗೆ ಲಸಿಕೆ ನೀಡುವ ಸಲುವಾಗಿ ಆರೋಗ್ಯ ಕಾರ್ಯಕರ್ತರು ಭಾರೀ ಸಾಹಸ ಮಾಡುತ್ತಾರೆ. ನದಿ ದಾಟುತ್ತಾರೆ, ಎತ್ತರದ ಗುಡ್ಡ ದಾಟಿ ಹೋಗಿ ಲಸಿಕೆ ನೀಡಿದ್ದಾರೆ. ಈಗ ಇಂಥದ್ದೇ ಒಂದು ವಿದ್ಯಮಾನದಲ್ಲಿ ಉಕ್ಕಿ ಹರಿಯುತ್ತಿರುವ ನದಿಗೆ ಅಡ್ಡಲಾಗಿ ತಾತ್ಕಾಲಿಕವಾಗಿ ನಿರ್ಮಿಸಿದ ಬಿದಿರಿನ ಕಾಲು ಸಂಕ ದಾಟಿ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. Watch … Continued