ಬೆಂಗಳೂರು: ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕು ಸಂಖ್ಯೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ ಇಳಿಕೆಯಾಗಿದೆ.
ರಾಜ್ಯದಲ್ಲಿ ಶುಕ್ರವಾರ ಹೊಸದಾಗಿ 470 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 368 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.50 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ. 1.91 ಕ್ಕೆ ಇಳಿಕೆಯಾಗಿದೆ
ರಾಜ್ಯದಲ್ಲಿ 9,671 ಸಕ್ರಿಯ ಪ್ರಕರಣಗಳಿವೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,82,869 ಕ್ಕೆ ಏರಿಕೆಯಾಗಿದೆ ಹಾಗೂ ಚೇತರಿಸಿಕೊಂಡವರ ಸಂಖ್ಯೆ 29,35,238 ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಸಂಖ್ಯೆ 37,931ಕ್ಕೆ ಏರಿದೆ.
ಬಳ್ಳಾರಿ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಸೋಂಕು ದೃಢಪಟ್ಟಿಲ್ಲ
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಏರಿಕೆಯಾಗಿದೆ . 232 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ, ಒಬ್ಬರು ಮೃತಪಟ್ಡಿದ್ದಾರೆ. 122 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಸೋಂಕಿನ ಮಾಹಿತಿ
ಬಾಗಲಕೋಟೆ – 1, ಬಳ್ಳಾರಿ – 0, ಬೆಳಗಾವಿ -5, ಬೆಂಗಳೂರು ಗ್ರಾಮಾಂತರ- 8, ಬೆಂಗಳೂರು ನಗರ. – 232, ಬೀದರ್ -1, ಚಾಮರಾಜನಗರ – 2, ಚಿಕ್ಕಬಳ್ಳಾಪುರ – 0, ಚಿಕ್ಕಮಗಳೂರು- 8, ಚಿತ್ರದುರ್ಗ – 3, ದಕ್ಷಿಣ ಕನ್ನಡ -36, ದಾವಣಗೆರೆ -1, ಧಾರವಾಡ -2, ಗದಗ – 0, ಹಾಸನ – 16, ಹಾವೇರಿ –0,
ಕಲಬುರಗಿ- 0, ಕೊಡಗು – 22, ಕೋಲಾರ -9, ಕೊಪ್ಪಳ -0, ಮಂಡ್ಯ – 16, ಮೈಸೂರು -59, ರಾಯಚೂರು- 20, ರಾಮನಗರ -4, ಶಿವಮೊಗ್ಗ – 4, ತುಮಕೂರು -16, ಉಡುಪಿ – 14, ಉತ್ತರ ಕನ್ನಡ – 11, ವಿಜಯಪುರ – 0, ಯಾದಗಿರಿ- 0
ನಿಮ್ಮ ಕಾಮೆಂಟ್ ಬರೆಯಿರಿ